ಬೆಂಗಳೂರು, 19 ಜೂನ್ (ಹಿ.ಸ.):
ಆ್ಯಂಕರ್:ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳಲು ಸಿದ್ದತೆ ನಡೆಸಿವೆ. ಆರ್ ಸಿಬಿ ವಿಜಯೋತ್ಸವ ಕಾಲ್ತುಳಿತ, ಮಂಗಳೂರು ಕೋಮುಗಲಭೆ, ಸೇರಿದಂತೆ ಹಲವು ಅಸ್ತ್ರಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷಗಳು ಅಣಿಯಾಗಿವೆ. ಪ್ರತ್ಯಾಸ್ತ್ರಗಳೊಂದಿಗೆ ಸರ್ಕಾರದವೂ ಸಿದ್ಧವಾಗುತ್ತಿದೆ. ಈ ಜಟಾಪಟಿ ಮುಂಗಾರು ಅಧಿವೇಶ ರಣಾಂಗಣವಾಗುವ ಲಕ್ಷಣಗಳಿವೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa