ಬೆಂಗಳೂರು, 19 ಜೂನ್ (ಹಿ.ಸ.):
ಆ್ಯಂಕರ್ : ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಅವರ ನಟನೆಯ ‘ಥಗ್ ಲೈಫ್’ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಆಗದಂತೆ ಕನ್ನಡಪರ ಸಂಘಟನೆಗಳು, ಚಲನಚಿತ್ರ ವಾಣಿಜ್ಯ ಮಂಡಳಿ, ಇನ್ನಿತರೆ ಕೆಲ ಸಂಘಟನೆಗಳು ತಡೆಯೊಡ್ಡಿದ್ದವು. ಆದರೆ ಸಿನಿಮಾ ನಿರ್ಮಾಣ ತಂಡ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿತ್ತು. ಸಿನಿಮಾ ಪರವಾಗಿ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿ, ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡುವಂತೆ , ರಾಜ್ಯ ಸರ್ಕಾರಕ್ಕೆ ಸೂಚಿಸಿ. ಅಲ್ಲದೆ ಈ ಬಗ್ಗೆ ಪ್ರತಿಕ್ರಿಯೆ ತಿಳಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. ಈ ಕುರಿತು ರಾಜ್ಯ ಸರ್ಕಾರವು ಸರ್ವೋಚ್ಚ ನ್ಯಾಯಾಲಯಕ್ಕೆ ತನ್ನ ಪ್ರತಿಕ್ರಿಯೆ ತಿಳಿಸಿದೆ.
ರಾಜ್ಯ ಸರ್ಕಾರವು ‘ಥಗ್ ಲೈಫ್’ ಸಿನಿಮಾದ ಮೇಲೆ ನಿಷೇಧ ಹೇರಿಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ಜೊತೆಗೆ, ಒಂದೊಮ್ಮೆ ಸಿನಿಮಾದ ನಿರ್ಮಾಪಕರು ‘ಥಗ್ ಲೈಫ್’ ಸಿನಿಮಾ ರಾಜ್ಯದಲ್ಲಿ ಬಿಡುಗಡೆ ಆದರೆ ಅದಕ್ಕೆ ಸೂಕ್ತ ಭದ್ರತೆಯನ್ನು ನೀಡುವುದಾಗಿಯೂ ಸಹ ರಾಜ್ಯ ಸರ್ಕಾರ ಹೇಳಿದೆ. ಸಿನಿಮಾಕ್ಕೆ ಸಂಬಂಧಿಸಿದ ನಟರು, ನಿರ್ಮಾಪಕರು, ವಿತರಕರು, ಪ್ರೇಕ್ಷಕರಿಗೆ ರಾಜ್ಯ ಸರ್ಕಾರವು ಸೂಕ್ತ ಭದ್ರತೆ ಒದಗಿಸಲಿದೆ’ ಎಂದು ತಿಳಿಸಿದೆ.
‘ಥಗ್ ಲೈಫ್’ ಸಿನಿಮಾದ ನಿಷೇಧದಲ್ಲಿ ತನ್ನ ಭಾಗವಹಿಸುವಿಕೆ ಇಲ್ಲವೆಂದು ಸ್ಪಷ್ಟಪಡಿಸಿರುವ ರಾಜ್ಯ ಸರ್ಕಾರ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ನಾಗರೀಕರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು ಹಾಗೂ ಯಾವುದೇ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ’ ಎಂದು ಸರ್ಕಾರ, ಸ್ಪಷ್ಟಪಡಿಸಿದೆ. ಆ ಮೂಲಕ ಒಂದೊಮ್ಮೆ ‘ಥಗ್ ಲೈಫ್’ ಸಿನಿಮಾ ರಾಜ್ಯದಲ್ಲಿ ಬಿಡುಗಡೆ ಆದರೆ ಸಿನಿಮಾಕ್ಕೆ ಸೂಕ್ತ ಭದ್ರತೆ ಒದಗಿಸುವುದಾಗಿ ಸರ್ಕಾರ ಸ್ಪಷ್ಟಪಡಿಸಿದೆ.
ಆದರೆ ಕನ್ನಡಪರ ಸಂಘಟನೆ ಮುಖಂಡ ಪ್ರವೀಣ್ ಶೆಟ್ಟಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದ್ದು, ಕನ್ನಡಪರ ಸಂಘಟನೆಗಳ ಸದಸ್ಯರು ಟಿಕೆಟ್ ಖರೀದಿ ಚಿತ್ರ ನೋಡಲು ಹೋಗುತ್ತೇವೆ ಎನ್ನುವ ಮೂಲಕ ಚಿತ್ರಮಂದಿರದ ಒಳಗೆ ಗಲಾಟೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದು. ಈ ಸನ್ನಿವೇಶದಲ್ಲಿ ಸರ್ಕಾರ ಹೇಗೆ ಭದ್ರತೆ ಒದಗಿಸಲಿದೆ ಎಂಬುದು ಕುತೂಹಲ ಕೆರಳಿಸಿದೆ.
‘ಥಗ್ ಲೈಫ್’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕಮಲ್ ಹಾಸನ್, ಕನ್ನಡ ಭಾಷೆ ತಮಿಳಿನಿಂದಲೇ ಜನಿಸಿದೆ ಎಂದಿದ್ದರು. ಕಮಲ್ ಅವರ ಈ ಹೇಳಿಕೆಗೆ ರಾಜ್ಯದಲ್ಲಿ ಕರ್ನಾಟಕದಲ್ಲಿ ತೀವ್ರ ವ್ಯಕ್ತವಾಗಿತ್ತು. ಕಮಲ್ ಅವರ ಹೇಳಿಕೆ ವಿರುದ್ಧ ಪ್ರತಿಭಟನೆಗಳು ನಡೆದವು, ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡಿದರೆ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚುವ ಬೆದರಿಕೆಯನ್ನು ಕನ್ನಡಪರ ಸಂಘಟನೆಗಳು ಹಾಕಿದ್ದವು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa