ರಾಜ್ಯ ರೈಲ್ವೆ ಮತ್ತು ಜಲ ಶಕ್ತಿಯ ಕೇಂದ್ರ ಸಚಿವರ ಪ್ರವಾಸ
ಹಾಸನ, 19 ಜೂನ್ (ಹಿ.ಸ.): ಆ್ಯಂಕರ್: ರಾಜ್ಯ ರೈಲ್ವೆ ಮತ್ತು ಜಲ ಶಕ್ತಿಯ ಕೇಂದ್ರ ಸಚಿವರಾದ ವಿ.ಸೋಮಣ್ಣ ಅವರು ಜೂ.20 ಮತ್ತು 21 ರಂದು ಹಾಸನ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜೂ.20 ರಂದು ಸಂಜೆ 6.30 ಗಂಟೆಗೆ ಹಾಸನಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈಲ್ವೆ ಹಾಗೂ ಕೆ.ಪಿ.ಟಿ.ಸಿ.ಎಲ್
ರಾಜ್ಯ ರೈಲ್ವೆ ಮತ್ತು ಜಲ ಶಕ್ತಿಯ ಕೇಂದ್ರ ಸಚಿವರ ಪ್ರವಾಸ


ಹಾಸನ, 19 ಜೂನ್ (ಹಿ.ಸ.):

ಆ್ಯಂಕರ್:

ರಾಜ್ಯ ರೈಲ್ವೆ ಮತ್ತು ಜಲ ಶಕ್ತಿಯ ಕೇಂದ್ರ ಸಚಿವರಾದ ವಿ.ಸೋಮಣ್ಣ ಅವರು ಜೂ.20 ಮತ್ತು 21 ರಂದು ಹಾಸನ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಜೂ.20 ರಂದು ಸಂಜೆ 6.30 ಗಂಟೆಗೆ ಹಾಸನಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈಲ್ವೆ ಹಾಗೂ ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ನಂತರ 7 ಗಂಟೆಗೆ ಚಿಕ್ಕಮಗಳೂರಿಗೆ ತೆರಳಲಿದ್ದಾರೆ.

ಜೂ.21 ರಂದು ಬೆಳಗ್ಗೆ 6 ಗಂಟೆಗೆ ಹಳೇಬೀಡಿಗೆ ಆಗಮಿಸಿ ಅಂತರಾಷ್ಟೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ನಂತರ 10 ಗಂಟೆಗೆ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿಮಠಕ್ಕೆ ಭೇಟಿ ನೀಡುವ ಸಚಿವರು ನಂತರ 11.45 ಕ್ಕೆ ಅರಸೀಕೆರೆ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ನಂತರ 12.15ಕ್ಕೆ ಅರಸೀಕೆರೆಯಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande