ಬಳ್ಳಾರಿ, 19 ಜೂನ್ (ಹಿ.ಸ.)
ಆ್ಯಂಕರ್: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಸಿಬ್ಬಂದಿ ವರ್ಗ, ಜಿಲ್ಲಾ ವಕೀಲರ ಸಂಘ, ಹಾಗೂ ರೀಡ್ಸ್ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ‘ಯೋಗವೆಂದರೆ ಆತ್ಮದ ಮೂಲಕ ಆತ್ಮದೆಡೆಗೆ ಆತ್ಮದ ಪ್ರಯಾಣ’ ಎಂಬ ಘೋಷವಾಕ್ಯದೊಂದಿಗೆ ಜೂ.21 ರಂದು ಬೆಳಿಗ್ಗೆ 5.45 ಗಂಟೆಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್