ರಾಯಚೂರು, 19 ಜೂನ್ (ಹಿ.ಸ.)
ಆ್ಯಂಕರ್: ಜಿಲ್ಲಾಡಲಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆಯುಷ್ ಇಲಾಖೆ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಹಾಗೂ ಯೋಗ ಸಂಘ ಸಂಸ್ಥಗಳ ಅಶ್ರಯದಲ್ಲಿ ಜೂನ್ 19ರಂದು ನಡೆದ ಯೋಗ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರುವ ಮೂಲಕ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಚಾಲನೆ ನೀಡಿದರು.
ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಿಂದ ಆರಂಭವಾದ ಜಾಥಾ ನಗರದ ಪ್ರಮುಖ ರಸ್ತೆಯಲ್ಲಿ ಸಾಗಿ ಸರ್ಕಾರಿ ಆಯುರ್ವೇದ ಮತ್ತು ಯುನಾನಿ ಆಸ್ಪತ್ರೆ ಎಕ್ ಮೀನಾರ್ ರೋಡ್ವರೆಗೆ ಸಂಚರಿಸಿತು. ಜಾಥಾದಲ್ಲಿ ಭಾಗಿಯಾಗಿದ್ದ ಶಾಲಾ ಮಕ್ಕಳು ನಾನಾ ಸಂದೇಶದ ಫಲಕಗಳನ್ನು ಪ್ರದರ್ಶಿಸಿ ಜಾಥಾದಲ್ಲಿ ಸಾಗಿ ಗಮನ ಸೆಳೆದರು.
ಜಾಥಾದಲ್ಲಿ ಆರೋಗ್ಯ ಅಧಿಕಾರಿ ಶಂಕರಗೌಡ್ರು, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ, ಕ್ಷೇತ್ರ ಶಿಕ್ಷಣ ಅಧಿಕಾರಿ ಕೆ.ಕೊಟ್ರಬಸಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಈರೇಶ್ ನಾಯಕ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಚಾಲಕರಾದ ಡಾ.ದಂಡಪ್ಪ ಬಿರಾದಾರ್, ಯೋಗ ತರಬೇತಿದಾರ ಡಾ.ತಿಮಪ್ಪ ವಡ್ಡೆಪಳ್ಳಿ ಆಯುಷ್ ಇಲಾಖೆಯ ಡಾ.ನವೀನ್, ಡಾ.ಪ್ರತಿಭಾ ಪಾಟೀಲ್, ಡಾ.ರಾಜೇಂದ್ರ, ಡಾ.ದುರುಗಪ್ಪ, ಡಾ.ಕನಕಲಕ್ಷ್ಮಿ, ಡಾ.ಅರುಣಾ, ಡಾ.ನಾಜಿಯಾ, ಡಾ.ಶಾಧೀಯಾ, ಆಯುಷ್ ಇಲಾಖೆಯ ಸಿಬ್ಬಂದಿ ವರ್ಗದವರು, ಭಾರತ ಸೇವಾದಳದ ವಿದ್ಯಾಸಾಗರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಪರಶುರಾಮ್, ದೈಹಿಕ ಶಿಕ್ಷಣ ಶಿಕ್ಷಕರಾದ ರಂಗನಾಥ್, ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಿಬ್ಬಂದಿ ಭಾಗಿಯಾಗಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್