ಬಂಟ್ವಾಳ, 02 ಜೂನ್ (ಹಿ.ಸ.) :
ಆ್ಯಂಕರ್ : ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅವರು ಮೇ 12ರಂದು ಬಂಟ್ವಾಳ ತಾಲ್ಲೂಕಿನ ಕಾವಳಪಡೂರು ಎಂಬಲ್ಲಿ ನಡೆದ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಮಾತುಗಳಲ್ಲಿ ಸಮಾಜದ ಮಧ್ಯ ವೈಮನಸ್ಸು ಉಂಟು ಮಾಡುವ ರೀತಿಯ ಪ್ರಚೋದನಾತ್ಮಕ ಹೇಳಿಕೆಗಳಿವೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಭಾರತೀಯ ನ್ಯಾಯಿ ಸಂಹಿತೆ ಕಲಂ 353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa