ಕೊಪ್ಪಳ, 02 ಜೂನ್ (ಹಿ.ಸ.) :
ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಕ್ರೀಡಾ ವಸತಿ ಶಾಲೆ/ ನಿಲಯಗಳಿಗೆ 2025-26ನೇ ಸಾಲಿಗೆ 8ನೇ ತರಗತಿಗೆ ಹಾಗೂ ಪ್ರಥಮ ಪಿ.ಯು.ಸಿ ತರಗತಿಗಳಿಗೆ ಪ್ರವೇಶ ನೀಡುವ ಸಂಬಂಧ ಅವಕಾಶ ವಂಚಿತ ಮತ್ತು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದ ಕ್ರೀಡಾಪಟುಗಳಿಗಾಗಿ ಜೂನ್ 06 ರಂದು ಏಕಕಾಲದಲ್ಲಿ ರಾಜ್ಯದ ವಿವಿಧ ಸ್ಥಳಗಳಲ್ಲಿ ವಿಶೇಷ ಆಯ್ಕೆ ಪ್ರಕ್ರಿಯೆ ಜರುಗಲಿದ್ದು, ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಭಾಗವಹಿಸಬಹುದು.
ಬಾಸ್ಕೆಟ್ಬಾಲ್, ಕಬಡ್ಡಿ, ವಾಲಿಬಾಲ್ ಕ್ರೀಡೆಗಳಿಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ, ಹಾಕಿ ಕ್ರೀಡೆಗೆ ಬೆಂಗಳೂರಿನ ಅಕ್ಕಿತಿಮ್ಮನಹಳ್ಳಿ ಹಾಕಿ ಕ್ರೀಡಾಂಗಣದಲ್ಲಿ, ಸೈಕ್ಲಿಂಗ್ ಕ್ರೀಡೆಗೆ ವಿಜಯಪುರದ ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ, ಜುಡೋ ಹಾಗೂ ಕುಸ್ತಿ ಕ್ರೀಡೆಗಳಿಗೆ ಬೆಳಗಾವಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಕಛೇರಿಯಲ್ಲಿ, ಅಥ್ಲೆಟಿಕ್ಸ್ ಹಾಗೂ ಫುಟ್ಬಾಲ್ ಕ್ರೀಡೆಗಳಿಗೆ ಸರ್ಕಾರಿ ಕ್ರೀಡಾ ಶಾಲೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ವಿದ್ಯಾನಗರ, ಬೆಂಗಳೂರು ಉತ್ತರದಲ್ಲಿ, ಖೋಖೋ ಕ್ರೀಡೆಗೆ ದಾವಣಗೆರೆಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಆಯ್ಕೆ ಪ್ರಕಿಯೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಜೂನ್ 06 ರಂದು ಬೆಳಿಗ್ಗೆ 09 ಗಂಟೆಗೆ ಸಂಬಂಧಿಸಿದ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಎ.ಎನ್ ಯತಿರಾಜು, ಖೋಖೋ ತರಬೇತುದಾರರು ಮೊ.ಸಂ: 9448633146, ರೋಹಿಣಿ ಪರ್ವತೀಕರ ಮೊ.ನಂ: 82173-24522, ಕಮಲ್ ಸಿಂಗ್, ಬಿಸ್ಟ್ ವಾಲಿಬಾಲ್ ತರಬೇತಿದಾರರು ಮೋ.ಸಂ:6360146300, ಸುರೇಶ, ವಾಲಿಬಾಲ್ ತರಬೇತುದಾರರು ಮೊ.ಸಂ.9901527333, ವಿಶ್ವನಾಥ ಕರ್ಲಿ, ಅಥ್ಲೆಟಿಕ್ಸ್ ತರಬೇತುದಾರರು ಮೋ: 8660455969, ದೀಪಾ, ವಾಲಿಬಾಲ್ ತರಬೇತುದಾರರು, ಸಣ್ಣ ವಾಲಿಬಾಲ್ ತರಬೇತಿ ಕೇಂದ್ರ, ಕೊಪ್ಪಳ ಮೊ.ಸಂ.8088143003 ಇವರನ್ನು ಸಂಪರ್ಕಿಸಬಹುದು ಎಂದು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್