ಗದಗ, 02 ಜೂನ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಗೆ ಜೂನ 3 ರಂದು ಮುಖ್ಯಂತ್ರಿಗಳು ಆಗಮಿಸಿ ಲಕ್ಕುಂಡಿ ಐತಿಹಾಸಿಕ ಸ್ಥಳದಲ್ಲಿ ನಮ್ಮ ಪರಂಪರೆಯನ್ನು ಪೂರ್ಣ ಪ್ರಮಾಣದಲ್ಲಿ ತಿಳಿಸುವಂತಹ, ಯುನೆಸ್ಕೋ ಅವರ ಜಾಗತಿಕ ಪ್ರವಾಸಿ ತಾಣ ಆಗುವ ಎಲ್ಲ ಅರ್ಹತೆ, ಆಕರ್ಷಣೆ ಹೊಂದಿರುವ ಲಕ್ಕುಂಡಿ ಸ್ಥಳದಲ್ಲಿ ಉತ್ಖನನ ಕಾರ್ಯಕ್ಕೆ ಚಾಲನೆ ನೀಡುವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರು ಹೇಳಿದರು.
ನಗರದ ಉಪವಿಭಾಗಾಧಿಕಾರಿಗಳ ಕಟ್ಟದಲ್ಲಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕಚೇರಿಯಲ್ಲಿ ಜರುಗಿದ ಪತ್ರಿಕಾ ಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.
ಸಿದ್ದರಾಮಯ್ಯ ಅವರು ನಂತರ ಲಕ್ಕುಂಡಿಯ ಬಯಲು ಪ್ರಾಚ್ಯಾವಶೇಷಗಳ ವಸ್ತು ಸಂಗ್ರಾಹಲಯದ ವೀಕ್ಷಣೆ ಮಾಡಿ ಕಾಶಿ ವಿಶ್ವನಾಥ ದೇಸವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಗದಗ ನಗರಕ್ಕೆ ಆಗಮಿಸುವರು. ಮಧ್ಯಾಹ್ನ 12.50 ಗಂಟೆಗೆ ಗದಗ ನಗರದ ಶ್ರೀ ಸ್ವಾಮಿ ವಿವೇಕಾನಂದ ಭವನದಲ್ಲಿ ಕರ್ನಾಟಕ ಕುರುಬರ ಸಂಘ ಮತ್ತು ಕರ್ನಾಟಕ ಕುರಬರ ಸಹಕಾರಿ ಪತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು.
ತದ ನಂತರ ಮಧ್ಯಾಹ್ನ 3.30 ಗಂಟೆಗೆ ಗದಗ ಕೋ- ಆಪರೇಟೀವ್ ಇಂಡಸ್ಟ್ರೀಯಲ್ ಎಸ್ಟೇಟ್ ಆವರಣಕ್ಕೆ ಆಗಮಿಸಿ ಜಿ.ಎನ್.ಟಿ.ಟಿ.ಎಫ್ ಸಂಸ್ಥೆ ಉದ್ಘಾಟನೆ ಗೊಳಿಸುವರು. ಸಾಯಂಕಾಲ 4.30 ಗಂಟೆಗೆ ಜಿಲ್ಲಾ ರಂಗಮಂದಿರದಲ್ಲಿ ಗದಗ-ಬೆಟಗೇರಿ ವ್ಯಾಪಾರ, ಸಂಸ್ಕೃತಿ ಮಥತು ವಸ್ತುಪ್ರದರ್ಶನ ಪ್ರಾಧಿಕಾರದ ಉದ್ಘಾಟನೆ ಹಾಗು 34 ಎಕರೆ ಪ್ರದೇಶದ ಪ್ರಾಧಿಕಾರದ ಪರಿಕಲ್ಪನೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಸಚಿವ ಎಚ್ ಕೆ ಪಾಟೀಲ ತಿಳಿಸಿದರು.
ನಂತರ ಮಾತನಾಡಿದ ಅವರು ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಚಾಲನೆ ನೀಡುವುದು ಮುಖ್ಯವಾದ ಕಾರ್ಯಕ್ರಮವಾಗಿದೆ. ಇದರಿಂದಾಗಿ ಲಕ್ಕುಂಡಿಯನ್ನು ಯುನೆಸ್ಕೋದ ಜಾಗತಿಕ ಪ್ರವಾಸಿ ತಾಣವನ್ನಾಗಿಸಲು ಅನುಕೂಲವಾಗಲಿದೆ. ಉತ್ಖನನಕ್ಕೆ ಬೇಕಾದಂತಹ ಅನುದಾನವನ್ನು ನೀಡುವದಕ್ಕೆ ಮುಖ್ಯಂಮತ್ರಿಯವರು ಭರವಸೆ ನೀಡಿದ್ದು ಉತ್ಖನನ ಕಾರ್ಯವನ್ನು ವೈಜ್ಞಾನಿಕವಾಗಿ ಆರ್ಥಿಕ ಅಡಚಣೆಯಾಗದಂತೆ ನಡೆಸಲಾಗುವದು. ಮೊದಲನೆ ಹಂತದಲ್ಲಿ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಉತ್ಖನನಕ್ಕೆ ಚಾಲನೆ ನೀಡಲಾಗುವದು. ಈ ಕಾರ್ಯಕ್ಕೆ ಪ್ರದೇಶಗಳನ್ನು ಗುರುತಿಸಿ ಒಪ್ಪಿಗೆ ಪಡೆದ ನಂತರವೇ ಪ್ರಾರಂಭಿಸಲಾಗುವದು. ಪ್ರಾಚ್ಯವಸ್ತುಗಳ ಅನ್ವೇಷಣೆಗೆ ಲಕ್ಕುಂಡಿ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಮುಂದೆ ಬಂದಿದ್ದು, ಮೊದಲನೆ ಅಭಿಯಾನದಲ್ಲಿಯೇ ಅಂದಾಜು 1200ಕ್ಕಿಂತ ಹೆಚ್ಚಲು ಅವಶೇಷಗಳು ದೊರಕಿವೆ. ಈಗಾಗಲೇ ಲಕ್ಕುಂಡಿ ಗ್ರಾಮದ ಐದು ಮನೆಯವರು ಮುಂದೆ ಬಂದು ಉತ್ಖನನಕ್ಕೆ ತಮ್ಮ ಮನೆ ಬಿಟ್ಟು ಕೊಡುವದಾಗಿ ತಿಳಿಸಿರುತ್ತಾರೆ. ಲಕ್ಕುಂಡಿಯಲ್ಲಿನ ಇಪ್ಪತ್ತೇಳು ಮನೆಗಳು ತೆರವಾದರೆ ಅಲ್ಲಿನ ಐದು ದೇವಸ್ಥಾನಗಳು ಸ್ಪಷ್ಟವಾಗಿ ಗೋಚರಿಸುತ್ತವೆ. ಈ ಮನೆಗಳ ಸ್ಥಳಾಂತರಕ್ಕೆ ಮನೆ ಮಾಲಿಕರೊಂದಿಗೆ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರವು ಸಿವಿಲ್ ಪ್ರೊಸಿಸರ್ ಕೋರ್ಟ ತಿದ್ದುಪಡಿ ಮಾಡಿ ಕೇಸ್ ಮ್ಯಾನೆಜಮೆಂಟ್ ಸಿಸ್ಟಮಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು ವ್ಯಾಜ್ಯದಲ್ಲಿ ಸಿ.ಪಿ.ಸಿ ಅಮೆಂಡಮೆಂಟ್ 2 ಜಾರಿಗೆ ಬಂದಿದೆ ಇದರಲ್ಲಿ ಸಿವಿಲ್ ಕೇಸಗೆ ಕಡ್ಡಾಯವಾಗಿ ರಾಜಿಗೆ ಅವಕಾಶ ಮಾಡಿಕೊಡಲಾಗುವದು. ಈ ಸಮಯದಲ್ಲಿ ರಾಜಿ ಆಗದೆ ಇದ್ದಲ್ಲಿ ನ್ಯಾಯಾಲಯದಲ್ಲಿ ಕೇಸ್ ಪ್ರಾರಂಭವಾದ ದಿನದಿಂದ ಕೇಸ್ ತೀರ್ಪ ಕೊಡುವ ದಿನಾಂಕವನ್ನು ನಿಗದಿಪಡಿಸುವದರ ಮೂಲಕ ಕ್ರಾಂತಿಕಾರಕ ಬದಲಾವಣೆ ತರಲಾಗಿದೆ. ನ್ಯಾಯ ವಿಧಾನ ಪದ್ಧತಿಯಲ್ಲಿ ವಿಶೇಷ ಸುಧಾರಣೆಗಳನ್ನು ಕಾಣುತ್ತಿದ್ದೇವೆ. ಶ್ರೀ ಸಾಮಾನ್ಯರ ಪ್ರಕರಣಗಳು ಎರಡು ವರ್ಷಗಳೊಳಗಾಗಿ ಪೂರ್ಣಗೊಳಿಸುವದರ ಮೂಲಕ ಜನ ಸಾಮಾನ್ಯರಿಗೆ ಆರ್ಥಿಕ ಹೊರೆಯಾಗದಂತೆ ನ್ಯಾಯ ಒದಗಿಸಲು ಈ ಕಾನೂನು ತಿದ್ದುಪಡಿ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಮುಂಗಾರು ಪ್ರಾರಂಭವಾದ ಹಿನ್ನಲೆಯಲ್ಲಿ ರೈತರಿಗೆ ವಿತರಿಸುವ ಬಿತ್ತನೆ ಬೀಜ ಕಳಪೆಯಾಗಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ಬಿ.ಬಿ.ಅಸೂಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕ್ಬರಸಾಬ್ ಬಬರ್ಚಿ,ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಗದಗ ತಾಲೂಕ ಅಧ್ಯಕ್ಷ ಅಶೋಕ ಮಂದಾಲಿ, ಬಸವರಾಜ ಕಡೇಮನಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Lalita MP