ಹುಬ್ಬಳ್ಳಿ, 02 ಜೂನ್ (ಹಿ.ಸ.) :
ಆ್ಯಂಕರ್ : ದೇಶದಲ್ಲಿ ಭಯೋತ್ಪಾದನೆ ಶುರುವಾಗಲು ನೇರ ಕಾರಣ ಕಾಂಗ್ರೆಸ್. ದೇಶದಲ್ಲಿ ಭಯೋತ್ಪಾದನೆ ಆರಂಭವಾದ ಸಂದರ್ಭದಲ್ಲಿ ಕಾಂಗ್ರೆಸ್ ಯಾಸಿನ್ ಮಲಿಕ್ ನಂತಹವರೊಂದಿಗೆ ಕೈ ಕುಲುಕಿ, ರಾಜಾತಿಥ್ಯ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ತುಷ್ಟೀಕರಣ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್ನವರು ಬೆಂಗಳೂರಿನ ರಾಮೇಶ್ವರಂ ಕೆಫೆ, ಮಂಗಳೂರು ಸ್ಫೋಟ, ಹುಬ್ಬಳ್ಳಿ ಗಲಾಟೆ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಶ್ಮೀರದ ಪಹಲ್ಗಾಮ್ ಘಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾತನಾಡುವ ರೀತಿ ಸರಿಯಲ್ಲ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa