ದೇಶದಲ್ಲಿ ಭಯೋತ್ಪಾದನೆಗೆ ಕಾಂಗ್ರೆಸ್ ಕಾರಣ : ಪ್ರಹ್ಲಾದ ಜೋಶಿ
ಹುಬ್ಬಳ್ಳಿ, 02 ಜೂನ್ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಭಯೋತ್ಪಾದನೆ ಶುರುವಾಗಲು ನೇರ ಕಾರಣ ಕಾಂಗ್ರೆಸ್. ದೇಶದಲ್ಲಿ ಭಯೋತ್ಪಾದನೆ ಆರಂಭವಾದ ಸಂದರ್ಭದಲ್ಲಿ ಕಾಂಗ್ರೆಸ್ ಯಾಸಿನ್​ ಮಲಿಕ್​ ನಂತಹವರೊಂದಿಗೆ ಕೈ ಕುಲುಕಿ, ರಾಜಾತಿಥ್ಯ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ತುಷ್ಟೀಕರಣ ರಾಜಕೀಯ ಮಾಡುತ್ತಿದೆ ಎಂದು
Joshi


ಹುಬ್ಬಳ್ಳಿ, 02 ಜೂನ್ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಭಯೋತ್ಪಾದನೆ ಶುರುವಾಗಲು ನೇರ ಕಾರಣ ಕಾಂಗ್ರೆಸ್. ದೇಶದಲ್ಲಿ ಭಯೋತ್ಪಾದನೆ ಆರಂಭವಾದ ಸಂದರ್ಭದಲ್ಲಿ ಕಾಂಗ್ರೆಸ್ ಯಾಸಿನ್​ ಮಲಿಕ್​ ನಂತಹವರೊಂದಿಗೆ ಕೈ ಕುಲುಕಿ, ರಾಜಾತಿಥ್ಯ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್ ತುಷ್ಟೀಕರಣ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಾಂಗ್ರೆಸ್​ನವರು ಬೆಂಗಳೂರಿನ ರಾಮೇಶ್ವರಂ ಕೆಫೆ, ಮಂಗಳೂರು ಸ್ಫೋಟ, ಹುಬ್ಬಳ್ಳಿ ಗಲಾಟೆ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಕಾಶ್ಮೀರದ ಪಹಲ್ಗಾಮ್ ಘಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಾತನಾಡುವ ರೀತಿ ಸರಿಯಲ್ಲ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande