ಬೆಂಗಳೂರಿನ ರಸ್ತೆ‌ ದುರಸ್ತಿ ಮಾಡಲು ಸರಕಾರಕ್ಕೆ ಯೋಗ್ಯತೆ ಇಲ್ಲ : ಪ್ರತಿಪಕ್ಷ ನಾಯಕ ಅಶೋಕ
ಬೆಂಗಳೂರು, 02 ಜೂನ್ (ಹಿ.ಸ.) : ಆ್ಯಂಕರ್ : ಗ್ರೇಟರ್‌ ಬೆಂಗಳೂರು ರಚನೆ ಮಾಡಿದ ನಂತರ ಅಭಿವೃದ್ಧಿ ಕಾರ್ಯ ಆಗಿದೆಯೇ ಎಂದು ನೋಡಬೇಕು. ಬೆಂಗಳೂರಿನಲ್ಲಿ ಎಲ್ಲ ರಸ್ತೆಗಳಲ್ಲಿ ಗುಂಡಿಗಳಿವೆ. ರಸ್ತೆಗಳನ್ನು ದುರಸ್ತಿ ಮಾಡುವ ಯೋಗ್ಯತೆಯೇ ಸರ್ಕಾರಕ್ಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರ್ಕಾರದ ವಿರುದ್ದ
Ashok


ಬೆಂಗಳೂರು, 02 ಜೂನ್ (ಹಿ.ಸ.) :

ಆ್ಯಂಕರ್ : ಗ್ರೇಟರ್‌ ಬೆಂಗಳೂರು ರಚನೆ ಮಾಡಿದ ನಂತರ ಅಭಿವೃದ್ಧಿ ಕಾರ್ಯ ಆಗಿದೆಯೇ ಎಂದು ನೋಡಬೇಕು. ಬೆಂಗಳೂರಿನಲ್ಲಿ ಎಲ್ಲ ರಸ್ತೆಗಳಲ್ಲಿ ಗುಂಡಿಗಳಿವೆ. ರಸ್ತೆಗಳನ್ನು ದುರಸ್ತಿ ಮಾಡುವ ಯೋಗ್ಯತೆಯೇ ಸರ್ಕಾರಕ್ಕೆ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಸ ವಿಲೇವಾರಿ ಮಾಡಲು ಗುತ್ತಿಗೆದಾರರಿಗೆ ಜನವರಿಯಿಂದಲೇ ಬಿಲ್‌ ಪಾವತಿ ಮಾಡಿಲ್ಲ. ಹೊರರಾಜ್ಯದವರಿಗೆ ಗುತ್ತಿಗೆ ನೀಡಿ ಕಸದ ಲಾಬಿ ಸೃಷ್ಟಿ ಮಾಡಿದ್ದಾರೆ. ಇಂತಹ ಸ್ಥಿತಿಯಲ್ಲಿ ಬಿಬಿಎಂಪಿ ಚುನಾವಣೆ ಮಾಡಿದರೆ ಕಾಂಗ್ರೆಸ್ ನವರು ಯಾವ ಮುಖ ಇಟ್ಟುಕೊಂಡು ಜನರ ಬಳಿಗೆ ಹೋಗುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande