ಮುಂಬಯಿ, 02 ಜೂನ್ (ಹಿ.ಸ.) :
ಆ್ಯಂಕರ್ : ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಥಾಣೆ ಜಿಲ್ಲೆಯ ಭಿವಾಂಡಿ ತಾಲ್ಲೂಕಿನ ಬೋರಿವಲಿ ಗ್ರಾಮ ಮತ್ತು ಪಡ್ಘಾ ಪ್ರದೇಶದಲ್ಲಿ ಭಯೋತ್ಪಾದನೆ ಸಂಬಂಧಿತ ತನಿಖೆಯ ಭಾಗವಾಗಿ ಸೋಮವಾರ ಬೆಳಗ್ಗೆ ದಾಳಿ ನಡೆಸಿ ಎಂಟು ಮಂದಿಯನ್ನು ಬಂಧಿಸಿದೆ.
ದಾಳಿ ವೇಳೆ ಎಟಿಎಸ್ ತಂಡವು ಡಿಜಿಟಲ್ ಪುರಾವೆಗಳು ಸೇರಿದಂತೆ ಹಲವಾರು ಅನುಮಾನಾಸ್ಪದ ವಸ್ತುಗಳನ್ನು ವಶಕ್ಕೆ ಪಡೆದಿದೆ. ದಾಳಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತೆಗಾಗಿ 400 ಕ್ಕೂ ಹೆಚ್ಚು ಪೊಲೀಸರು ನಿಯೋಜಿಸಲಾಗಿದೆ.
ಈ ಕಾರ್ಯಾಚರಣೆಯ ಅಂಗವಾಗಿ, 2003ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮತ್ತು ನಿಷೇಧಿತ ಸಂಘಟನೆಯಾದ ಸಿಮಿಯ ಮಾಜಿ ಮುಖಂಡ ಸಾಕಿಬ್ ನಾಚನ್ ಅವರ ನಿವಾಸದಲ್ಲಿಯೂ ಶೋಧನೆ ನಡೆಸಲಾಗಿದೆ. 2017ರ ಬಳಿಕ ಅವರು ಮತ್ತೆ ತೀವ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ಎಟಿಎಸ್ ಶಂಕೆ ವ್ಯಕ್ತಪಡಿಸಿದೆ.
ಈ ಕುರಿತು ಎಟಿಎಸ್ ಅಧಿಕೃತ ಹೇಳಿಕೆ ನೀಡಿಲ್ಲದರೂ, ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa