ಲಕ್ನೋ, 02 ಜೂನ್ (ಹಿ.ಸ.) :
ಆ್ಯಂಕರ್ : ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ತಮ್ಮ ಸಂಬಂಧಿಯಾದ ಆಕಾಶ್ ಆನಂದ್ ಅವರನ್ನು ಮತ್ತೆ ಮುಖ್ಯ ರಾಷ್ಟ್ರೀಯ ಸಂಯೋಜಕರಾಗಿ ನೇಮಿಸಿರುವುದಕ್ಕೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಕೆಲವು ವ್ಯಕ್ತಿಗಳು ಬಿಎಸ್ಪಿಯ ಹಿತಕ್ಕಾಗಿ ತೆಗೆದುಕೊಳ್ಳುವ ನಿರ್ಣಯಗಳಿಂದ ಅಸಮಾಧಾನ ಹೊಂದಿದ್ದಾರೆ ಎಂದಿದ್ದಾರೆ.
ಆಜಾದ್ ಸಮಾಜ ಪಕ್ಷದ ನಾಯಕ ಚಂದ್ರಶೇಖರ್ ಆಜಾದ್ ಅವರನ್ನು ಉಲ್ಲೇಖಿಸದೇ ಮಾಯಾವತಿ ತೀವ್ರ ಟೀಕೆ ಮಾಡಿದ್ದಾರೆ. “ಮಳೆಗಾಲದ ಕಪ್ಪೆಗಳು” ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್, ಬಿಜೆಪಿ ಹಾಗೂ ಎಸ್ಪಿ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಬಿಎಸ್ಪಿಯ ಒಗ್ಗಟ್ಟನ್ನು ದುರ್ಬಲಗೊಳಿಸುತ್ತಿರುವವರನ್ನು ಜನರು ಎಚ್ಚರದಿಂದ ನೋಡಬೇಕೆಂದು ಕರೆ ನೀಡಿದ್ದಾರೆ.
ಬಿಎಸ್ಪಿಯು ಅಂಬೇಡ್ಕರ್ವಾದಿ ಪಕ್ಷವಾಗಿದ್ದು, ಸಮಾಜದ ಹಿತಕ್ಕಾಗಿ ಶಿಷ್ಟಾಚಾರಬದ್ಧವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.
ಚಂದ್ರಶೇಖರ್ ಆಜಾದ್ ಅವರು ಬಿಎಸ್ಪಿಯಿಂದ ಹೊರನಡೆದವರು ಮರಳಿ ಬರುವುದನ್ನು “ಬಲವಂತ” ಎಂದೂ ವಿರೋಧಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa