ಪಹಲ್ಗಾಮ್ ದಾಳಿಯ ನಂತರ ಮೊದಲ ಬಾರಿ ಪ್ರಧಾನಿ ಮೋದಿ ಕಾಶ್ಮೀರ ಭೇಟಿ
ನವದೆಹಲಿ, 02 ಜೂನ್ (ಹಿ.ಸ.) : ಆ್ಯಂಕರ್ : ಪಹಲ್ಗಾಮ್ ಉಗ್ರ ದಾಳಿಯ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಜೂನ್ 7ರಂದು ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಈ ವೇಳೆ ದೇಶದ ಉಳಿದ ಭಾಗಗಳೊಂದಿಗೆ ಕಾಶ್ಮೀರ ಕಣಿವೆಯನ್ನು ಸಂಪರ್ಕಿಸುವ ಪ್ರಮುಖ ರೈಲು ಸಂಪರ್ಕವನ್ನು ಉದ್ಘಾಟಿಸುವ ಸಾಧ್ಯತೆಯೂ
Pm


ನವದೆಹಲಿ, 02 ಜೂನ್ (ಹಿ.ಸ.) :

ಆ್ಯಂಕರ್ : ಪಹಲ್ಗಾಮ್ ಉಗ್ರ ದಾಳಿಯ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಜೂನ್ 7ರಂದು ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಈ ವೇಳೆ ದೇಶದ ಉಳಿದ ಭಾಗಗಳೊಂದಿಗೆ ಕಾಶ್ಮೀರ ಕಣಿವೆಯನ್ನು ಸಂಪರ್ಕಿಸುವ ಪ್ರಮುಖ ರೈಲು ಸಂಪರ್ಕವನ್ನು ಉದ್ಘಾಟಿಸುವ ಸಾಧ್ಯತೆಯೂ ಇದೆ.

ಈ ಮಹತ್ವದ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ರೈಲ್ವೆ ಇಲಾಖೆಯ ಅಧಿಕಾರಿಗಳು ಅಂತಿಮ ಸಿದ್ಧತೆಗಳಲ್ಲಿ ತೊಡಗಿದ್ದಾರೆ. ಜಮ್ಮು ವಿಭಾಗದ ಕತ್ರಾ ನಗರದಿಂದ ಬಾರಾಮುಲ್ಲಾವರೆಗೆ ಚಲಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ.

ಮೂಲತಃ ಈ ರೈಲು ಉದ್ಘಾಟನೆ ಏಪ್ರಿಲ್ 19ರಂದು ನಡೆಯಬೇಕಿತ್ತು, ಆದರೆ ಪ್ರತಿಕೂಲ ಹವಾಮಾನದಿಂದಾಗಿ ಮುಂದೂಡಲಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande