ಲಂಡನ್, 02 ಜೂನ್ (ಹಿ.ಸ.) :
ಆ್ಯಂಕರ್ : ಪಾಕಿಸ್ತಾನ ಭಿಕ್ಷೆ ಬೇಡಿಕೊಂಡು ಪಡೆದುಕೊಳ್ಳುವ ಹಣದಿಂದ ಭಯೋತ್ಪಾದನೆಯನ್ನು ಪೋಷಿಸುತ್ತಿದೆ ಎಂದು ಭಾರತೀಯ ಸಂಸದೀಯ ನಿಯೋಗದ ಸದಸ್ಯರು ಲಂಡನ್ನಲ್ಲಿ ಕಠಿಣ ವಾಗ್ದಾಳಿ ನಡೆಸಿದರು.
ಇಂಡಿಯಾ ಹೌಸ್ನಲ್ಲಿ ಮಾತನಾಡಿದ ಬಿಜೆಪಿ ಸಂಸದ ಗುಲಾಮ್ ಅಲಿ ಖತಾನಾ, ಪಾಕಿಸ್ತಾನ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ, ಭಾರತಕ್ಕೆ ಭಯೋತ್ಪಾದನೆಯನ್ನು ಹತ್ತಿಕ್ಕುವುದು ಚೆನ್ನಾಗಿ ತಿಳಿದಿದೆ ಎಂದರು.
ಮಾಜಿ ಕೇಂದ್ರ ಸಚಿವ ಎಂ.ಜೆ. ಅಕ್ಬರ್, “ಭಯೋತ್ಪಾದನೆಯನ್ನು ಅಹಿಂಸೆಯಿಂದ ಎದುರಿಸಬೇಕೆಂಬುದು ಗಾಂಧೀಜಿಯವರ ಮಾತಲ್ಲ” ಎಂದು ಪ್ರತಿಪಾದಿಸಿ, ಇಂದು ಭಾರತ ಬಲಿಷ್ಠ ಪ್ರತಿಕ್ರಿಯೆ ನೀಡುತ್ತಿದೆ ಎಂದರು.
ಬಿಜೆಪಿ ಸಂಸದೆ ಪುರಂದೇಶ್ವರಿ, ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆ ಬಳಿಕ ನಡೆದ ‘ಆಪರೇಷನ್ ಸಿಂಧೂರ್’ ಕುರಿತು ವಿವರಿಸಿದರು.
ಇದೇ ಸಂದರ್ಭದಲ್ಲಿ ಇತರ ಸಂಸದರು, ಪಾಕಿಸ್ತಾನ ಧರ್ಮವನ್ನು ದುರುಪಯೋಗಪಡಿಸಿಕೊಂಡು ಭಯೋತ್ಪಾದನೆ ಹರಡುತ್ತಿದೆ ಎಂದು ಆರೋಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa