ಕಲಬುರಗಿ, 2 ಜೂನ್ (ಹಿ.ಸ.):
ಆ್ಯಂಕರ್ : ಕಲಬುರಗಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಕಳೆದ ನಾಲ್ಕು ತಿಂಗಳಿನಿಂದ ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರಿಗೆ ನೀಡಬೇಕಾದ ಹಣ ಕಾಂಗ್ರೆಸ್ ಕಾರ್ಯಕರ್ತರಿಗೆ ಹರಿದುಹೋಗುತ್ತಿದೆ, ಎಂದು ಗಂಭೀರ ಆರೋಪ ಮಾಡಿದ್ದಾರೆ.
ಗ್ಯಾರೆಂಟಿ ಯೋಜನೆಯ ಅನುಷ್ಟಾನ ಸಮಿತಿಗೆ ಮಾತ್ರ ವೇತನ ನೀಡಲಾಗುತ್ತಿದೆ ಎಂದು ದೂರಿದ್ದು, ಎಲ್ಲಾ ಮಹಿಳೆಯರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕರೆ ನೀಡಿದರು.
ಇದೇ ವೇಳೆ ರೈತರಿಗೆ ನೀಡಲಾಗುತ್ತಿದ್ದ ₹4000 ಸಹಾಯಧನವನ್ನು ರದ್ದುಪಡಿಸಿರುವುದು, ಬಿಜ ಗೊಬ್ಬರದ ಬೆಲೆ ಏರಿಕೆ ಹಾಗೂ ಜನ ಔಷಧಿ ಕೇಂದ್ರಗಳ ಸ್ಥಗಿತ ಕುರಿತೂ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಕೇಂದ್ರದ ಜನಪರ ಯೋಜನೆಗಳನ್ನು ಸ್ಥಗಿತಗೊಳಿಸುತ್ತಿರುವುದು ಜನ ವಿರೋಧಿ ನಡೆ ಎಂದು ಕಿಡಿಕಾರಿದರು.
ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಭಾರತ್ ಮಾತಾ ಕೀ ಜೈ ಎಂಬವರ ಮೇಲೆ ಪ್ರಕರಣ, ಆದರೆ ದೇಶ ವಿರೋಧಿ ಘೋಷಣೆ ಕೂಗುವವರ ಮೇಲೆ ಕ್ರಮವಿಲ್ಲ ಎಂದು ಆರೋಪಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Samarth biral