ನವದೆಹಲಿ, 02 ಜೂನ್ (ಹಿ.ಸ.) :
ಆ್ಯಂಕರ್ : ಈಶಾನ್ಯ ಭಾರತದ ಅಸ್ಸಾಂ, ಅರುಣಾಚಲ ಪ್ರದೇಶ, ಮಣಿಪುರ, ಸಿಕ್ಕಿಂ ಮತ್ತು ಮೇಘಾಲಯ ರಾಜ್ಯಗಳು ಭೀಕರ ಮಳೆ, ಭೂಕುಸಿತ ಮತ್ತು ಪ್ರವಾಹದಿಂದ ತತ್ತರಿಸುತ್ತಿರುವ ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
2016 ರಲ್ಲಿಯೇ ಬಿಜೆಪಿ 'ಪ್ರವಾಹಮುಕ್ತ ಅಸ್ಸಾಂ' ಭರವಸೆ ನೀಡಿತ್ತು. 2022 ರಲ್ಲಿ ಗೃಹ ಸಚಿವ ಅಮಿತ್ ಶಾ ಅದನ್ನು ಪುನರಾವರ್ತಿಸಿದರು. ಆದರೆ ಇಂದು 'ಸ್ಮಾರ್ಟ್ ಸಿಟಿ' ಗುವಾಹಟಿಗೆ ಡಬಲ್ ಎಂಜಿನ್ ಸರ್ಕಾರಗಳ ದ್ರೋಹ ಬಗೆದಿವೆ ಎಂದಿದ್ದಾರೆ.
ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಪ್ರವಾಹ ಪರಿಹಾರಕ್ಕಾಗಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಎಂದು ಆಗ್ರಹಿಸಿದ್ದಾರೆ.
ಇದೇ ವೇಳೆ ಅವರು ಕಾಂಗ್ರೆಸ್ ಕಾರ್ಯಕರ್ತರಿಗೆ, ಬಾಧಿತ ಪ್ರದೇಶಗಳಲ್ಲಿ ತಕ್ಷಣ ಸಹಾಯ ಕಾರ್ಯಗಳಿಗೆ ಮುಂದಾಗುವಂತೆ ಕರೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa