ಜೋಳ ಖರೀದಿಗಾಗಿ `ಸಿಂಧನೂರು ಬಂದ್' ಯಶಸ್ವಿ
ಸಿಂಧನೂರು, 02 ಜೂನ್ (ಹಿ.ಸ.) : ಆ್ಯಂಕರ್ : ಜೋಳ ಖರೀದಿ ಮಾಡಲು ಆಗ್ರಹಿಸಿ ರೈತಪರ, ಪ್ರಗತಿಪರ ಸಂಘಟನೆಗಳು ಸೋಮವಾರ ಕರೆ ನೀಡಿದ್ದ `ಸಿಂಧನೂರು ಬಂದ್' ಸಂಪೂರ್ಣ ಯಶಸ್ವಿಯಾಗಿದೆ. ಸಿಂಧನೂರು ಬಂದ್ ಅಂಗವಾಗಿ ಸೋಮವಾರ ಬೆಳಗ್ಗೆಯಿಂದಲೇ ವ್ಯಾಪಾರಸ್ಥರು, ಅಂಗಡಿ ಮುಂಗಟ್ಟು ಸ್ವಯಂ ಪ್ರೇರಿತವಾಗಿ ಬಂ
ಜೋಳ ಖರೀದಿಗಾಗಿ `ಸಿಂಧನೂರು ಬಂದ್' ಯಶಸ್ವಿ


ಸಿಂಧನೂರು, 02 ಜೂನ್ (ಹಿ.ಸ.) :

ಆ್ಯಂಕರ್ : ಜೋಳ ಖರೀದಿ ಮಾಡಲು ಆಗ್ರಹಿಸಿ ರೈತಪರ, ಪ್ರಗತಿಪರ ಸಂಘಟನೆಗಳು ಸೋಮವಾರ ಕರೆ ನೀಡಿದ್ದ `ಸಿಂಧನೂರು ಬಂದ್' ಸಂಪೂರ್ಣ ಯಶಸ್ವಿಯಾಗಿದೆ.

ಸಿಂಧನೂರು ಬಂದ್ ಅಂಗವಾಗಿ ಸೋಮವಾರ ಬೆಳಗ್ಗೆಯಿಂದಲೇ ವ್ಯಾಪಾರಸ್ಥರು, ಅಂಗಡಿ ಮುಂಗಟ್ಟು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಬೆಂಬಲ ನೀಡಿ, ರಸ್ತೆಗಿಳಿದು ಹೋರಾಟದಲ್ಲಿ ಪಾಲ್ಗೊಂಡು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿರು.

ಸಿಂಧನೂರು ತಾಲೂಕು ಬಂದ್ ಹೋರಾಟಕ್ಕೆ ಸಿಪಿಐಎಂ ಲಿಬರೇಶನ್ ಸೇರಿ ವಿವಿಧ ಪಕ್ಷಗಳು, ಜಮಾತೆ ಇಸ್ಲಾಂ, ರೈತಪರ, ಕನ್ನಡಪರ, ವರ್ತಕರ, ಗುತ್ತಿಗೆದಾರರ ಸಂಘ, ತಾಲೂಕ ವಕೀಲರ ಸಂಘ, ಗಂಜ್ ವರ್ತಕರು, ಗೊಬ್ಬರ ಅಂಗಡಿಗಳ ಮಾಲಿಕರು, ಗುತ್ತೆದಾರರ ಸಂಘ, ಪ್ರಗತಿ ಪರ ಸಂಘಟನೆಗಳು ಬೆಂಬಲ ನೀಡಿದವು.

ರೈತರು ಅನೇಕ ದಿನಗಳಿಂದ ಜೋಳ ಖರೀದಿ ಆರಂಭಿಸಲು ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ನಮ್ಮ ಹೋರಾಟ ತೀವ್ರ ವಾಗುತ್ತಿದ್ದಂತೆ ಸ್ಥಳೀಯ ಜನಪ್ರತಿನಿಧಿಗಳು ಬೆಂಕಿ ಹತ್ತಿದಾಗ ಬಾವಿ ತೋಡಲು ಹೊರಟಿದ್ದಾರೆ. ಸರ್ಕಾರಕ್ಕೆ, ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲ ಎನ್ನುವುದು ಸ್ಪಷ್ಟ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಿ ರೈತರು ಅರೆ ಬೆತ್ತಲೆ ರಸ್ತೆ ತಡೆ ರಸ್ತೆಯಲ್ಲಿ ಕುಳಿತ ಊಟ ಮಾಡಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ತಹಶೀಲ್ದಾರ್ ಕಚೇರಿಯ ಮುಖ್ಯದ್ವಾರದಲ್ಲಿ ಲಾರಿ ನಿಲ್ಲಿಸಿ ಪ್ರತಿಭಟನೆ ನಡೆಸಿದ್ದರು.

ಲಿಂಗಸುಗೂರು ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ ಹಾಗೂ ಪ್ರಭಾರ ತಹಶೀಲ್ದಾರ್ ಶೃತಿ ಅವರು ಬೇಡಿಕೆ ಈಡೇರಿಕೆಗೆ ನಾಲ್ಕು ದಿನ ಸಮಯ ಕೇಳಿದ್ದಾಗ, ರೈತರು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದರು. ಆದರೂ, ಜೋಳ ಖರೀದಿ ಕುರಿತು ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

2024ರ ಡಿಸೆಂಬರ್‍ನಲ್ಲಿ ಬೆಳೆ ನೋಂದಣಿ ಮಾಡಿಕೊಂಡಿರುವ ರೈತರಿಗೆ ಬೆಂಬಲ ಬೆಲೆಯ ಹಣ ಬಿಡುಗಡೆ ಮಾಡಿಲ್ಲ. 2025ರ ಜನವರಿಯಲ್ಲಿ ಜೋಳ ಖರೀದಿ ಮಾಡಲಿಲ್ಲ. ಸರ್ಕಾರ ಫೆಬ್ರವರಿಯಲ್ಲಿ ನೋಂದಣಿ ಮಾಡಿಕೊಂಡು ಮೇನಲ್ಲಿ ಜೋಳ ಖರೀದಿ ಆರಂಭಿಸಿದೆ. ಅಧಿಕಾರಿಗಳು ರೈತರ ಜೊತೆ ಆಟವಾಡುತ್ತಿದ್ದಾರೆ ಎಂದರು.

ಜೋಳ ಕಣ ಮಾಡಿ 45 ದಿನಗಳಾದರೆ ನುಸಿ, 60 ದಿನಗಳಾದರೆ ಹುಳ ಬರುತ್ತದೆ ಎಂಬುದು ಸಾಮಾನ್ಯ ಜನರಿಗೂ ಗೊತ್ತು. ಈ ಮಾಹಿತಿ ಅಧಿಕಾರಿಗಳಿಗೆ ಇಲ್ಲವಾಗಿದೆ. ಸರ್ಕಾರ ಮತ್ತು ಅಧಿಕಾರಿಗಳು ರೈತ ವಿರೋಧಿಗಳು, ರೈತ ದ್ರೋಹಿಗಳು ಮತ್ತು ದೇಶದ ಬೆನ್ನೆಲುಬಾಗಿರುವ ಕೃಷಿಯ ಬೆನ್ನೆಲುಬನ್ನು ಬಾಗಿಸುವ ಸಂಚುದಾರರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande