ಧಾರವಾಡ, 02 ಜೂನ್ (ಹಿ.ಸ.) :
ಆ್ಯಂಕರ್ : ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು ಎಂಬ ಅಂಶದ ಮೇಲೆ ಧಾರವಾಡದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ - 2025 ಕಾರ್ಯಕ್ರಮದಲ್ಲಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ನಿಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳು ಹಮ್ಮಿಕೊಳ್ಳಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ ಇಲಾಖೆ ಮತ್ತು ವಿವಿಧ ಶೈಕ್ಷಣಿಕ ಸಂಸ್ಥೆಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಪ್ಲಾಸ್ಟಿಕ್ ವಿರುದ್ಧದ ಹೋರಾಟಕ್ಕೆ ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಮುಖ್ಯ ಉದ್ದೇಶವಾಗಿತ್ತು.
ಕಾರ್ಯಕ್ರಮದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಜಗದೀಶ ಐ.ಹೆಚ್. ಅವರು ಪ್ಲಾಸ್ಟಿಕ್ ಬಳಸುವ ಹಾನಿಯ ಬಗ್ಗೆ ತಿಳಿಸಿ, ಏಕಬಳಕೆಯ ಪ್ಲಾಸ್ಟಿಕ್ ನಿಷೇಧದ ಮಹತ್ವವನ್ನು ವಿವರಿಸಿದರು.
ಹಿರಿಯ ನ್ಯಾಯಾಧೀಶ ಪರಶುರಾಮ ಎಫ್. ದೊಡ್ಡಮನಿ ಅವರು ಪರಿಸರದಲ್ಲಿ ಪ್ರತಿಯೊಂದು ಜೀವಿಯ ಪಾತ್ರವನ್ನು ಕುರಿತು ಮಾತನಾಡಿ, ಮಕ್ಕಳಲ್ಲಿ ಪರಿಸರ ರಕ್ಷಣೆಯ ಭಾವನೆ ಬೆಳೆಸುವ ಅಗತ್ಯವಿದೆ ಎಂದು ಹೇಳಿದರು.
ಪರಿಸರ ಅಧಿಕಾರಿ ಗೋಪಾಲಕೃಷ್ಣ ಸಣತಂಗಿ ಅವರು ಸೆಪ್ಟೆಂಬರ್ ತಿಂಗಳಲ್ಲಿ ಬಣ್ಣ ರಹಿತ ಮಣ್ಣಿನ ಗಣೇಶ ವಿಗ್ರಹಗಳ ಬಗ್ಗೆ ವಿದ್ಯಾರ್ಥಿಗಳಿಗೆ ನಿಬಂಧ ಬರೆಯಲು ಪ್ರೇರೇಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa