ಬಳ್ಳಾರಿ, 20 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ಪ್ರಖ್ಯಾತ ಮಯೂರ ಕಲಾ ಸಂಘದ ಕಾರ್ಯದರ್ಶಿಗಳಾಗಿದ್ದ, ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಕಲಾವಿದ ಬಿ. ಗಂಗಾಧರ (ಗಂಗಣ್ಣ) ಅವರು (64) ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದು, ಶನಿವಾರ ಬೆಳಗ್ಗೆ ಮೃತರ ಅಂತ್ಯ ಸಂಸ್ಕಾರ ನೆರವೇರಲಿದೆ.
ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಸಂಖ್ಯೆಯ ಕಲಾಭಿಮಾನಿಗಳು ಇದ್ದಾರೆ.
ವೀರಶೈವ ವಿದ್ಯಾವರ್ಧಕ ಸಂಘದ ರಾವ್ ಬಹುದ್ದೂರ್ ಇಂಜಿನಿಯರಿಂಗ್ ಕಾಲೇಜಿನ ಸಿಬ್ಬಂದಿಯಾಗಿ, ಮಯೂರ ಕಲಾ ಸಂಘದ ಮೂಲಕ ಕಲೆ ಮತ್ತು ಸಂಸ್ಕೃತಿಯನ್ನು ಪೋಷಿಸುವಲ್ಲಿ ಅವಿರತ ಶ್ರಮಿಸಿರುವ ಗಂಗಣ್ಣ ಅವರಿಗೆ ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ, ರಾಘವ ಪ್ರಶಸ್ತಿ ಸೇರಿ ಪ್ರಶಸ್ತಿ - ಪುರಸ್ಕಾರಗಳು ಲಭಿಸಿವೆ.
ಮೃತರ ಅಂತ್ಯಕ್ರಿಯೆಯು ವೀರಶೈವ ರುದ್ರಭೂಮಿಯಲ್ಲಿ ಶನಿವಾರ ಬೆಳಗ್ಗೆ 1ಂ ಗಂಟೆಗೆ ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ನೆರವೇರಲಿದೆ.
ವಿವರಗಳಿಗಾಗಿ : 9481044025 ಗೆ ಕರೆ ಮಾಡಿರಿ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್