ಕುಕನೂರು ಪ.ಪಂ : ನಾನಾ ಯೋಜನೆಗಳಡಿ ಅರ್ಜಿ ಆಹ್ವಾನ
ಕೊಪ್ಪಳ, 20 ಜೂನ್ (ಹಿ.ಸ.) : ಆ್ಯಂಕರ್ : ಕುಕನೂರು ಪಟ್ಟಣ ಪಂಚಾಯತಿ ವತಿಯಿಂದ 2025-26ನೇ ಸಾಲಿನ ಎಸ್.ಎಫ್.ಸಿ ಅನುದಾನದಲ್ಲಿ ಶೇ.24.10 ಹಾಗೂ ಶೇ.7.25 ರ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗದ ನಾನಾ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹ
ಕುಕನೂರು ಪ.ಪಂ : ನಾನಾ ಯೋಜನೆಗಳಡಿ ಅರ್ಜಿ ಆಹ್ವಾನ


ಕೊಪ್ಪಳ, 20 ಜೂನ್ (ಹಿ.ಸ.) :

ಆ್ಯಂಕರ್ : ಕುಕನೂರು ಪಟ್ಟಣ ಪಂಚಾಯತಿ ವತಿಯಿಂದ 2025-26ನೇ ಸಾಲಿನ ಎಸ್.ಎಫ್.ಸಿ ಅನುದಾನದಲ್ಲಿ ಶೇ.24.10 ಹಾಗೂ ಶೇ.7.25 ರ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗದ ನಾನಾ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ಇತರೆ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವ್ಯಕ್ತಿಗತ ಕಾರ್ಯಕ್ರಮ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿದ ತಲಾ ಶೇ.40 ರ ಕಾರ್ಯಕ್ರಮದಲ್ಲಿ ನಾನಾ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ಶೇ.7.25ರ ಯೋಜನೆಯ ಅನುದಾನದಲ್ಲಿ ಶೇ.40 ರ ಕಾರ್ಯಕ್ರಮದಲ್ಲಿ ಇತರೆ ಬಡ ಜನಾಂಗದ ನಾನಾ ಹಂತದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ.

ಈ ಸೌಲಭ್ಯಕ್ಕಾಗಿ ಫಲಾನುಭವಿಗಳು ಹಿಂದಿನ ವರ್ಷದ ಅಂಕಪಟ್ಟಿ, ಚಾಲ್ತಿ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಶಿಕ್ಷಣ ಸಂಸ್ಥೆಯಿಂದ ಪ್ರಮಾಣ ಪತ್ರ, ಪ್ರಸಕ್ತ ಸಾಲಿನಲ್ಲಿ ಯಾವುದೇ ಇಲಾಖೆಯಿಂದ ಪ್ರೋತ್ಸಾಹಧನ ಪಡೆದಿಲ್ಲದಿರುವ ಕುರಿತು ಒಪ್ಪಿಗೆ ಪತ್ರ(ಛಾಪಾ ಕಾಗದ), ಚಾಲ್ತಿ ವರ್ಷದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಸ್ಪಷ್ಟವಾಗಿರುವ ಬ್ಯಾಂಕ್ ಪಾಸ್‍ಪುಸ್ತಕದ ಝೆರಾಕ್ಸ್ ಪ್ರತಿ, ಇತ್ತೀಚಿನ 2 ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಪ.ಪಂ. ವ್ಯಾಪ್ತಿಯ ವಿಕಲಚೇತನರಿಗಾಗಿ ನೀಡಲಾಗುವ ಸಾಧನ ಸಲಕರಣೆಗಳನ್ನು(02 ಶ್ರವಣ ಯಂತ್ರಗಳು) ಪಡೆಯಲು ಅಂಗವಿಕಲತೆಯ ಪ್ರಮಾಣ ಪತ್ರ, ವಿಕಲಚೇತನ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಆದಾಯ ಪ್ರಮಾಣ ಪತ್ರ, ವಿಕಲಚೇತನರ ಇತ್ತೀಚಿನ 2 ಭಾವಚಿತ್ರಗಳನ್ನು ಸಲ್ಲಿಸಬೇಕು.

ಬುದ್ದಿಮಾಂದ್ಯ ಮತ್ತು ಸಿ.ಪಿ. ಮಕ್ಕಳ ಫಿಜಿಯೋಥೆರಪಿಗೆ ಬೇಕಾದ ಸಾಮಗ್ರಿಗಳನ್ನು (ಅಂಗವಿಕಲ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸರ್ಕಾರೇತರ ಸಂಸ್ಥೆಗೆ) ಪಡೆಯಲು ವಿಕಲಚೇತನರು ಸಂಸ್ಥೆಯ ನೋಂದಣಿ ಮತ್ತು ನವೀಕರಣ ಪ್ರತಿ, 5 ವರ್ಷದ ಲೆಕ್ಕ ಪರಿಶೋಧನಾ ವರದಿ, ಸಂಸ್ಥೆಯ ಪಾನ್‍ಕಾರ್ಡ್, ಸಂಸ್ಥೆಯ ಬ್ಯಾಂಕ್ ಖಾತೆ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಪರಿಶಿಷ್ಟ ಪಂಗಡದವರಿಗೆ ಪಕ್ಕಾ ಮನೆ ನಿರ್ಮಾಣಕ್ಕೆ ನೀಡಲಾಗುವ ಸಹಾಯಧನ(ರೂ.50,000/-)ಕ್ಕಾಗಿ ಫಲಾನುಭವಿಗಳು ಚಾಲ್ತಿ ಸಾಲಿನ ಆಸ್ತಿ ತೆರಿಗೆ ರಶೀದಿ, ಪ.ಪಂ. ಯಲ್ಲಿ ಸ್ವತ್ತಿನ ಖಾತೆ ಇದ್ದ ಬಗ್ಗೆ ಚಾಲ್ತಿ ಸಾಲಿನ ನಮೂನೆ-3, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಫಲಾನುಭವಿಯ ಇತ್ತೀಚಿನ 2 ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಪರಿಶಿಷ್ಟ ಜಾತಿಯ ಎಲ್‍ಎಲ್‍ಬಿ ಪದವಿ ಹೊಂದಿದ ವೃತ್ತಿ ನಿರತ ವಕೀಲರಿಗೆ ಪುಸ್ತಕ ಖರೀದಿಗಾಗಿ ಸಹಾಯಧನ ಪಡೆಯಲು ಎಲ್‍ಎಲ್‍ಬಿ ಪಾಸಿಂಗ್ ಪ್ರಮಾಣ ಪತ್ರ, ಕರ್ನಾಟಕ ವಕೀಲರ ಪರಿಷತ್‍ನಿಂದ ವಕೀಲರ ನೋಂದಣಿ ಪ್ರಮಾಣ ಪತ್ರ, ಆಲ್ ಇಂಡಿಯಾ ಬಾರ್ ಎಕ್ಸಾಮಿನೇಶನ್ ಪಾಸಾದ ಪ್ರಮಾಣ ಪತ್ರ, ಸಂಬಂಧಪಟ್ಟ ವಕೀಲರ ಸಂಘದಲ್ಲಿ ಸದಸ್ಯತ್ವ ಪಡೆದಿರುವ ಬಗ್ಗೆ ಪ್ರಮಾಣ ಪತ್ರ, ವಕೀಲರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತ್ತೀಚಿನ ಒಂದು ಭಾವಚಿತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಮೇಲಿನ ಸೌಲಭ್ಯಗಳನ್ನು ಪಡೆಯಲು ಅರ್ಜಿದಾರರು ಪ್ರಸಕ್ತ ಸಾಲಿನಲ್ಲಿ ಯಾವುದೇ ಇಲಾಖೆಯಿಂದ ಪ್ರೋತ್ಸಾಹಧನ ಸೌಲಭ್ಯ ಪಡೆದಿರಬಾರದು. ಪಟ್ಟಣ ಪಂಚಾಯತಿ ವ್ಯಾಪ್ತಿಯ ಕಾಯಂ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಪೂರ್ಣ ದಾಖಲಾತಿ ಇರದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೇ ತಿರಸ್ಕರಿಸಲಾಗುವುದು. ಅಂಗವಿಕಲರ ಅಭಿವೃದ್ಧಿಗಾಗಿ ಶ್ರಮಿಸುವ ಸರ್ಕಾರೇತರ ಸಂಸ್ಥೆಯು ಈ ಹಿಂದೆ ಯಾವುದೇ ಇಲಾಖೆಯಿಂದ ಆರ್ಥಿಕ ಸಹಾಯಧನ ಮತ್ತು ಫಿಜಿಯೋ ಥೆರಪಿಗೆ ಬೇಕಾದ ಸಾಮಗ್ರಿಗಳನ್ನು ಪಡೆದಿರಬಾರದು. ಪಕ್ಕಾ ಮನೆ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿರುವ ಅರ್ಜಿದಾರರ ಹೆಸರಿನಲ್ಲಿ ಆಸ್ತಿ ಹೊಂದಿರಬೇಕು ಎಂದು ಪ.ಪಂ. ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande