ರಾಯಚೂರು, 20 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ, ಪ್ರಾದೇಶಿಕ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಬರುವ ರಾಯಚೂರು ತಾಲೂಕಿನ ಆರ್ಟಿಪಿಎಸ್ ಕಾಲೋನಿಯಲ್ಲಿ ಟೈಪ್-3, ಟೈಪ್-4, ಟೈಪ್-6, ಟೈಪ್-5 ಮತ್ತು ಟೈಪ್-7, ಮನೆಗಳ ಸುತ್ತಲು ಇರುವ ಅಪಾಯಕಾರಿ ನೀಲಗಿರಿ ಹಾಗೂ ಇತರೆ ಜಾತಿಯ ಒಟ್ಟು 74 ಮರಗಳ ತೆರವಿಗೆ ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯಿದೆ 1976 ಕಲಂ 8(3)(1/11)ರ ಅಡಿಯಲ್ಲಿ ಅನುಮತಿ ನೀಡಬೇಕಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ತಮ್ಮ ಸಲಹೆ, ಅಭಿಪ್ರಾಯ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ತಾಲೂಕಿನ ಪ್ರಾದೇಶಿಕ ಅರಣ್ಯ ವಿಭಾಗದ ಕಚೇರಿಗೆ ಜೂನ್ 30ರೊಳಗಾಗಿ ಸಲ್ಲಿಸಬೇಕೆಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್