ರಾಯಚೂರು, 20 ಜೂನ್ (ಹಿ.ಸ.) :
ಆ್ಯಂಕರ್ : 2025-26ನೇ ಸಾಲಿನ ರಾಜ್ಯ ಯುವನೀತಿ-2012 ಅನುಷ್ಠಾನದಡಿ ನಮ್ಮೂರ ಶಾಲೆ ನಮ್ಮ ಯುವಜನರು ಯೋಜನೆಯನ್ನು 2017-18ನೇ ಸಾಲಿನಿಂದ ಅನ್ವಯಿಸುವಂತೆ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಜಿಲ್ಲೆಯಿಂದ ಒಂದು ಶಾಲೆಯನ್ನು ಗುರುತಿಸಿ ಆಯ್ಕೆಯಾದ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.1 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಿದೆ.
ಈ ಅನುದಾನದಲ್ಲಿ ರೂ.10,000 ಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮತ್ತು ರೂ.90,000 ಗಳನ್ನು ಶಾಲೆಯ ಎಸ್.ಡಿ.ಎಮ್.ಸಿ ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳ ಖರೀದಿ ಮಾಡುವ ಮಾರ್ಗಸೂಚಿಯನ್ನು ಪರಿಷ್ಕರಿಸಿದೆ. ಜಿಲ್ಲೆಯ ಅರ್ಹ ಶಾಲೆಗಳು ಜೂನ್ 27 ರೊಳಗಾಗಿ ಪ್ರಶಸ್ತಿ ಪತ್ರಗಳು ಎಲ್ಲಾ ದಾಖಲೆಗಳು, ಮುಖ್ಯೋಪಾಧ್ಯಾಯರು ಮತ್ತು ಎಸ್.ಡಿ.ಎಮ್.ಸಿ ಅಧ್ಯಕ್ಷರ ಜಂಟಿ ಖಾತೆ ಪಾಸ್ ಬುಕ್ ನಕಲು ಪ್ರತಿ ಸೇರಿ ಇತರೆ ದಾಖಲೆಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಯಚೂರು ಇವರಿಗೆ ಸಲ್ಲಿಸುವುದು.
ಹಾಗೊಂದು ವೇಳೆ ಅಪೂರ್ಣ ಮತ್ತು ತಡವಾಗಿ ಬರುವ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿ ಹಾಗೂ ಇನ್ನಿತರ ವಿವರಗಳಿಗಾಗಿ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ, ರಾಯಚೂರು ಇಲ್ಲಿ ಕಚೇರಿಯ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ್ಲ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್