11ನೇ ಯೋಗ ದಿನಾಚರಣೆ ಆಚರಣೆ
ಗದಗ, 21 ಜೂನ್ (ಹಿ.ಸ.) : ಆ್ಯಂಕರ್ : 11ನೇ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಸಮೀಕ್ಷಾ ಘಟಕ, ಗದಗ ಕಚೇಯ ಆವರಣದಲ್ಲಿ ಯೋಗ ದಿನಾಚರಣೆಯ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜಿಲ್ಲಾ ಸಮೀಕ್ಷಣಾಧಿಕಾರಿಗಳು ಮಾತನಾಡಿ ಇಂದಿನ ದಿನಮಾನಗಳಲ್ಲಿ ಯೋಗದ ಮಹತ್ವವನ್ನು ಎಲ್ಲರಿಗೂ ತಿಳಿಸಿದ
ಪೋಟೋ


ಗದಗ, 21 ಜೂನ್ (ಹಿ.ಸ.) :

ಆ್ಯಂಕರ್ : 11ನೇ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಸಮೀಕ್ಷಾ ಘಟಕ, ಗದಗ ಕಚೇಯ ಆವರಣದಲ್ಲಿ ಯೋಗ ದಿನಾಚರಣೆಯ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಸಮೀಕ್ಷಣಾಧಿಕಾರಿಗಳು ಮಾತನಾಡಿ ಇಂದಿನ ದಿನಮಾನಗಳಲ್ಲಿ ಯೋಗದ ಮಹತ್ವವನ್ನು ಎಲ್ಲರಿಗೂ ತಿಳಿಸಿದರು. ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡುವುದರಿಂದ ಮನಸ್ಸಿನ ಸಮತೋಲನವನ್ನು ಹಾಗೂ ಆರೋಗ್ಯವನ್ನು ವೃದ್ಧಿಸಲು ಸಹಕಾರಿಯಾಗುವುದೆಂದು ತಿಳಿಸಿದರು.

ರವಿ ಉಮಚಗಿ, ಯೋಗಶಿಕ್ಷಕರು, ರವರು ಮಾತನಾಡಿ ಯೋಗವನ್ನು ಪ್ರತಿನಿತ್ಯ ಮಾಡುವುದರಿಂದ ದೇಹಕ್ಕ್ಕೆ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿದರು. ಯೋಗವು ಇಂದಿನ ದಿನಮಾನಗಳಲ್ಲಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಎಲ್ಲರಿಗೂ ಮನವರಿಕೆ ಮಾಡಿಕೊಟ್ಟರು. ನಂತರ ಈ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ರವಿ ಉಮಚಗಿ, ಯೋಗಶಿಕ್ಷಕರು, ಕ್ರಮಬದ್ಧವಾಗಿ ಯೋಗಾಭ್ಯಾಸವನ್ನು ಮಾಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿಗಳಾದ ಡಾ. ವೆಂಕಟೇಶ ರಾಠೋಡ ರವರು ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು. ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ರವರು ಉಪಸ್ಥಿತರಿದ್ದರು. ಜಿಲ್ಲಾ ಸಮೀಕ್ಷಣಾ ಘಟಕದ ಕಚೇರಿಯ ಎಲ್ಲ ಅಧಿಕಾರಿಗಳು/ಸಿಬ್ಬಂದಿ ವರ್ಗದವರು ಹಾಜರಿದ್ದು, ಯೋಗದ ಮಹತ್ವವನ್ನು ಅರಿತುಕೊಂಡು ಯೋಗಾಭ್ಯಾಸ ಮಾಡಿದರು. ಕಾರ್ಯಕ್ರಮವನ್ನು ಮುತ್ತುನಗೌಡ ರಬ್ಬನಗೌಡ್ರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ನಿರೂಪಿಸಿ, ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande