ಹೊಸಪೇಟೆ, 21 ಜೂನ್ (ಹಿ.ಸ.) :
ಆ್ಯಂಕರ್ : ಹೊಸಪೇಟೆ ತಾಲೂಕಿನ 2025-26 ನೇ ಸಾಲಿನ ಕೆಂದ್ರ ಪುರಸ್ಕøತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ತಾಳೆ ಬೆಳೆ ಬೆಳೆಯಲು ಆಸಕ್ತ ರೈತರು ತೋಟಗಾರಿಕೆ ಇಲಾಖೆಗೆ ಅರ್ಜಿ ಸಲ್ಲಿಸಲು ಆಹ್ವಾನಿಲಾಗಿದೆ ಎಂದು ಹೊಸಪೇಟೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಎಂ.ರಮೇಶ್ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆಬೆಳೆ ಯೋಜನೆ : ನೀರಿನ ಸೌಲಭ್ಯ ಹೊಂದಿರುವ ಫಲಾನುಭವಿಗಳಿಗೆ ಹೊಸ ಪ್ರದೇಶ ವಿಸ್ತರಣೆ ಪ್ರತಿ ಹೆಕ್ಟರ್ಗೆ 20 ಸಾವಿರ ರೂಗಳ ಸಹಾಯಧನ ನೀಡಲಾಗುತ್ತದೆ. ಈ ಹಿಂದೆ ಅಭಿವೃದ್ದಿ ಪಡಿಸಲಾದ ತಾಳೆ ಬೆಳೆ ತೋಟಗಳ ಮೊದಲನೇ, ಎರಡನೇ, ಮೂರನೇ ಮತ್ತು ನಾಲ್ಕನೇ ವರ್ಷದ ನಿರ್ವಹಣೆಗೆ ಪ್ರತಿ ಹೆಕ್ಟರ್ 5,250 ರೂಗಳ ಮೊತ್ತದ ರಾಸಾಯನಿಕ ಮತ್ತು ಸಾವಯವ ಗೊಬ್ಬರ ನೀಡಲಾಗುತ್ತದೆ.
ತಾಳೆ ಬೆಳೆಯುವ ರೈತರು ಮೊದಲ ನಾಲ್ಕು ವರ್ಷದವರೆಗೆ ತಾಳೆ ಬೆಳೆಯಲ್ಲಿ ತೋಟಗಾರಿಕೆ ಬೆಳೆಗಳ ಅಂತರ ಬೇಸಾಯ ಕೈಗೊಂಡಲ್ಲಿ ಪ್ರತಿ ಹೆಕ್ಟರ್ ಗೆ 5 ಸಾವಿರ ರೂಗಳ ಸಹಾಯಧನ ನೀಡಲಾಗುವುದು. ತಾಳೆ ಬೆಳೆ ಕೃಷಿಗೆ ಅಗತ್ಯವಿರುವ ಯಂತ್ರೋಪಕರಣಗಳ ಖರೀದಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಗಂಡ ಮತ್ತು ಮಹಿಳೆಯರಿಗೆ ಶೇ.50 ರಷ್ಟು ಹಾಗೂ ಇತರ ರೈತರಿಗೆ ಶೇ.40 ರಷ್ಟು ಸಹಾಯಧನ ನೀಡಲಾಗುವುದು.
ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ತೋಟಗಾರಿಕೆ ಇಲಾಖೆ ಹೊಸಪೇಟೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಹಾಗೂ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತರು ಆಯಾ ಹೋಬಳಿಯ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಹೊಸಪೇಟೆ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ 9164297220, ಮರಿಯಮ್ಮನಹಳ್ಳಿ ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ 7204888978, ಕಮಲಾಪುರ ರೈತ ಸಂಪರ್ಕ ಕೇಂದ್ರ ಸಹಾಯಕ ತೋಟಗಾರಿಕೆ ಅಧಿಕಾರಿ 8123465548, ಹೊಸಪೇಟೆ ಜಿಪಂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 8310291867 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್