ಭದ್ರತೆಗೆ ಧಕ್ಕೆಯಾಗಿದ್ದರೆ ಕಠಿಣ ಪ್ರತಿಕ್ರಿಯೆ : ಪಾಕ್ ಗೆ ರಾಜನಾಥ ಸಿಂಗ್ ಎಚ್ಚರಿಕೆ
ಉಧಮ್ಪುರ್, 21 ಜೂನ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನದಿಂದ ಭವಿಷ್ಯದಲ್ಲಿ ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆದರೆ, ಕಠಿಣ ಪ್ರತಿಕ್ರಿಯೆ ಅನಿವಾರ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ಉಧಮ್ಪುರ್ ನಲ್ಲಿ ಉತ್ತರ ಕಮ
Rajnath singh


ಉಧಮ್ಪುರ್, 21 ಜೂನ್ (ಹಿ.ಸ.) :

ಆ್ಯಂಕರ್ : ಪಾಕಿಸ್ತಾನದಿಂದ ಭವಿಷ್ಯದಲ್ಲಿ ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆದರೆ, ಕಠಿಣ ಪ್ರತಿಕ್ರಿಯೆ ಅನಿವಾರ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ಉಧಮ್ಪುರ್ ನಲ್ಲಿ ಉತ್ತರ ಕಮಾಂಡ್‌ ಸೈನಿಕರನ್ನು ಉದ್ದೇಶಿಸಿ ಅವರು ಮಾತನಾಡಿ ಆಪರೇಷನ್ ಸಿಂಧೂರ್ ಇನ್ನೂ ಮುಕ್ತಾಯವಾಗಿಲ್ಲ ಎಂದು ಹೇಳಿದ್ದಾರೆ.

ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ ಮೇ 6-7 ರಂದು ಪಾಕಿಸ್ತಾನ ಹಾಗೂ ಪಿಓ ಕೆ ಯ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಭಾರತ ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

2016ರ ಸರ್ಜಿಕಲ್ ಸ್ಟ್ರೈಕ್ ಮತ್ತು 2019ರ ವಾಯುದಾಳಿಯ ಮುಂದುವರಿದ ಹೆಜ್ಜೆಯೇ ಆಪರೇಷನ್ ಸಿಂಧೂರ್ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande