ಸುಬ್ರಹ್ಮಣ್ಯ, 21 ಜೂನ್ (ಹಿ.ಸ.) :
ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಬಳಿ ಇಂದು ಬೆಳಿಗ್ಗೆ 04:23ಕ್ಕೆ ಯೆಡಕುಮಾರಿ – ಶಿರಿಬಾಗಿಲು ನಡುವಿನ ಹಳಿಗೆ ಮೆಟೀರಿಯಲ್ ರೈಲಿನಿಂದ ಬಂಡೆಗಳು ಬಿದ್ದ ಪರಿಣಾಮವಾಗಿ ಹಲವು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ.
16511 ಬೆಂಗಳೂರು - ಕಣ್ಣೂರು ಎಕ್ಸ್ಪ್ರೆಸ್ ರೈಲನ್ನು ಕಡಗರವಳ್ಳಿಯಲ್ಲಿ ತಡೆಹಿಡಿಯಲಾಗಿದೆ.
16585 ಬೆಂಗಳೂರು - ಮುರುಡೇಶ್ವರ ಎಕ್ಸ್ಪ್ರೆಸ್ ಮತ್ತು
07377 ವಿಜಯಪುರ - ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಸಕಲೇಶಪುರದಲ್ಲಿ ನಿಲ್ಲಿಸಲಾಗಿದೆ.
ಸಿಲುಕಿರುವ ಪ್ರಯಾಣಿಕರಿಗೆ ಕುಡಿಯುವ ನೀರು, ಉಪಾಹಾರ, ಬಿಸ್ಕತ್ತು ಮತ್ತು ಚಹಾ ವ್ಯವಸ್ಥೆಯನ್ನು ರೇಲ್ವೆ ಇಲಾಖೆ ವತಿಯಿಂದ ಕಲ್ಪಿಸಲಾಗಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು
ನೈಋತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ತಿಳಿಸಿದ್ದಾರೆ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa