ರೈಲ್ವೆ ಹಳಿ ಮೇಲೆ ಬಂಡೆ ಬಿದ್ದು ಅಡಚಣೆ ನಿವಾರಣೆ : ಪ್ರಯಾಣ ಪುನರಾರಂಭ
ಸುಬ್ರಹ್ಮಣ್ಯ, 21 ಜೂನ್ (ಹಿ.ಸ.) : ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಯೆಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವಿನ ರೈಲ್ವೆ ಹಳಿಗೆ ಬೆಳಿಗ್ಗೆ ಬಂಡೆಗಳು ಬಿದ್ದ ಪರಿಣಾಮ, ಹಲವಾರು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಯಂತ್ರಿಸಲಾಗಿತ್ತು. ರೈಲ್ವೆ ಇಲಾಖೆ ತಕ್ಷಣವೇ ತುರ್ತ
Train delay


ಸುಬ್ರಹ್ಮಣ್ಯ, 21 ಜೂನ್ (ಹಿ.ಸ.) :

ಆ್ಯಂಕರ್ : ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಯೆಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವಿನ ರೈಲ್ವೆ ಹಳಿಗೆ ಬೆಳಿಗ್ಗೆ ಬಂಡೆಗಳು ಬಿದ್ದ ಪರಿಣಾಮ, ಹಲವಾರು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಯಂತ್ರಿಸಲಾಗಿತ್ತು.

ರೈಲ್ವೆ ಇಲಾಖೆ ತಕ್ಷಣವೇ ತುರ್ತು ಕ್ರಮ ಕೈಗೊಂಡು ಹಳಿ ಮೇಲಿರುವ ಎಲ್ಲಾ ಬಂಡೆಗಳನ್ನು ತೆರವುಗೊಳಿಸಿದೆ.

20 ಕಿ.ಮೀ ವೇಗ ನಿರ್ಬಂಧದೊಂದಿಗೆ ರೈಲು ಸಂಚಾರ ಪುನರಾರಂಭಗೊಂಡಿದೆ.

ಈ ಮೂಲಕ ನಿಯಂತ್ರಿತ ಎಲ್ಲ ರೈಲುಗಳ ಸಂಚಾರವನ್ನು ಪುನರಾರಂಭಿಸಲಾಗಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ್ ಕನಮಡಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande