ಹೊಸಪೇಟೆ, 21 ಜೂನ್ (ಹಿ.ಸ.) :
ಆ್ಯಂಕರ್ : ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್ ಜೋಷಿ ಅವರು ಜೂ.22 ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜೂ.22 ರಂದು ಬೆಳಿಗ್ಗೆ 10 ಗಂಟೆಗೆ ಹೊಸಪೇಟೆಯ ತಹಶೀಲ್ದಾರ ಕಚೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಬಳ್ಳಾರಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ, ಗದಗ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಹಾವೇರಿ ಜಿಲ್ಲಾ ಕಸಾಪ ಅಧ್ಯಕ್ಷ ಲಿಂಗಯ್ಯ ಬಿ.ಹಿರೇಮಠ, ಕಲಬುರಗಿ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ರಾಯಚೂರು ಜಿಲ್ಲಾ ಕಸಾಪ ಅಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ, ಕೊಪ್ಪಳ ಜಿಲ್ಲಾ ಕಸಾಪ ಅಧ್ಯಕ್ಷ ಶರಣೇಗೌಡ ಪೆÇಲೀಸ್ ಪಾಟೀಲ ಅವರ ಉಪಸ್ಥಿತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಬಳಿಕ ಮಧ್ಯಾಹ್ನ 02 ಗಂಟೆಗೆ ಬಳ್ಳಾರಿಯಲ್ಲಿ ಜರುಗುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಸಿದ್ಧತೆಗಾಗಿ ಹಿರಿಯ ಸಾಹಿತಿಗಳು, ಇತರೆ ಕನ್ನಡ ಪರ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್