ಬಳ್ಳಾರಿ, 21 ಜೂನ್ (ಹಿ.ಸ.) :
ಆ್ಯಂಕರ್ : ನೆಹರು ಯುವ ಕೇಂದ್ರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಹಾಗೂ ಚಿಗುರು ಕಲಾ ತಂಡ ಇವರುಗಳ ಸಂಯುಕ್ತಾಶ್ರಯದಲ್ಲ್ಲಿ ಸಂಡೂರು ತಾಲ್ಲೂಕಿನ ಹೊಸದರೋಜಿ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಯೋಗ ದಿನಾಚರಣೆಯನ್ನು ಶನಿವಾರ ಯೋಗಾಭ್ಯಾಸ ಮಾಡುವ ಮೂಲಕ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಮಹೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿ ಪ್ರತಿಯೊಬ್ಬರು ಯೋಗ ಮಾಡುವುದರಿಂದ ಮಾನಸಿಕ ನೆಮ್ಮದಿ ಮತ್ತು ತಾಳ್ಮೆಯಿಂದಿರಲು ಸಾಧ್ಯ ಎಂದು ತಿಳಿಸಿದರು.
ಬಳಿಕ ಚಿಗುರು ಕಲಾತಂಡದ ಹುಲಗಪ್ಪ ಎಸ್.ಎಮ್ ಮತ್ತು ಮೋಹನ್ ಅವರು ವಿವಿಧ ಆಯಾಮಗಳನ್ನು ಮಾಡಿಸಿದರು. ನಂತರ ಶಾಲೆ ಮಕ್ಕಳಿಗೆ ಬೆಳಗಿನ ಉಪಹಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹೊಸ ದರೋಜಿ ಗ್ರಾಮ ಪಂಚಾಯಿತಿಯ ಸಿಬ್ಬಂದಿ, ಶಾಲೆಯ ಎಲ್ಲಾ ಮುಖ್ಯ ಗುರುಗಳು, ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್