ಶಿವಮೊಗ್ಗ, 22 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ಯುವನೀತಿ 2012 ಅನುಷ್ಠಾನದಡಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಿದ್ದು, ಶಿವಮೊಗ್ಗ ಜಿಲ್ಲೆಯ ಆಸಕ್ತ ಸರ್ಕಾರಿ ಶಾಲೆಗಳಿಂದ ಜೂನ್ 25ರೊಳಗಾಗಿ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಯೋಜನೆಯ ಉದ್ದೇಶ:
ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳಿಗೆ ಪ್ರೋತ್ಸಾಹಧನ ನೀಡುವುದು.
ಅನುದಾನ ವಿವರ:
ಪ್ರತಿ ಆಯ್ಕೆಯಾದ ಶಾಲೆಗೆ ₹1 ಲಕ್ಷ
₹10,000 ದೈಹಿಕ ಶಿಕ್ಷಕರಿಗೆ
₹90,000 – ಎಸ್.ಡಿ.ಎಂ.ಸಿ. ಮೂಲಕ ಕ್ರೀಡಾ ಸಾಮಗ್ರಿಗಳ ಖರೀದಿ
ಅರ್ಜೆ ಸಲ್ಲಿಸಲು ವಿಳಾಸ:
ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ
ಹಿಂದೂಸ್ತಾನ್ ಸಮಾಚಾರ್ / Rakesh Mahadevappa