ಉತ್ತರಾಖಂಡದಲ್ಲಿ ಕಾರು-ಟ್ರಾಲಿ ಅಪಘಾತ : ನಾಲ್ವರ ಸಾವು
ಡೆಹ್ರಾಡೂನ್, 22 ಜೂನ್ (ಹಿ.ಸ.) : ಆ್ಯಂಕರ್ : ಉತ್ತರಾಖಂಡದ ಡೆಹ್ರಾಡೂನ್ ಸಮೀಪದ ಆಶಾರೋಡಿ ಬಳಿ ಭಾನುವಾರ ಮುಂಜಾನೆ ಕಾರು ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಹರಿಯಾಣದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘ
Accident


ಡೆಹ್ರಾಡೂನ್, 22 ಜೂನ್ (ಹಿ.ಸ.) :

ಆ್ಯಂಕರ್ : ಉತ್ತರಾಖಂಡದ ಡೆಹ್ರಾಡೂನ್ ಸಮೀಪದ ಆಶಾರೋಡಿ ಬಳಿ ಭಾನುವಾರ ಮುಂಜಾನೆ ಕಾರು ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಹರಿಯಾಣದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಡೆಹ್ರಾಡೂನ್‌ನ ಕ್ಲೆಮೆಂಟೌನ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ 3 ಗಂಟೆ ಸುಮಾರಿಗೆ ನಡೆದಿದೆ. ಸಹರಾನ್‌ಪುರದಿಂದ ಡೆಹ್ರಾಡೂನ್ ಕಡೆಗೆ ಬರುತ್ತಿದ್ದ ಮಾರುತಿ ರಿಟ್ಜ್ ಕಾರು ಮುಂದೆ ಸಾಗುತ್ತಿದ್ದ ಸಿಮೆಂಟ್ ತುಂಬಿದ ಟ್ರಾಲಿಗೆ ಡಿಕ್ಕಿ ಹೊಡೆದಿದೆ. ಮೃತರು ಹರ್ಯಾಣದ ಸೋನಿಪತ್ ಮತ್ತು ಜಿಂದ್ ಜಿಲ್ಲೆಯವರೆಂದು ಗುರುತಿಸಲಾಗಿದೆ. ಗಾಯಾಳು ವಿನಯ್‌ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande