ಬೆಂಗಳೂರು, 22 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿ ಕೆ.ವಿ.ಎಲ್ ಎಂಪ್ಲಾಯೀಸ್ ಹೌಸ್ ಬಿಲ್ಡಿಂಗ್ ಕೋ ಆಪರೇಟಿವ್ ಸೊಸೈಟಿ ಲಿ.ಬೆಂಗಳೂರು ವತಿಯಿಂದ ಆಯೋಜಿಸಿದ್ದ ಸೊಸೈಟಿಯ ಉದ್ಘಾಟನಾ ಸಮಾರಂಭ ಮತ್ತು ಉದ್ದೇಶಿತ ಬಡಾವಣೆಗಳ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಹಕಾರ ಸಂಸ್ಥೆಗಳ ಬೆಳವಣಿಗೆ ಸಮಾಜದ ಆರ್ಥಿಕ ಅಭಿವೃದ್ಧಿ, ಸಾಮಾಜಿಕ ಕಲ್ಯಾಣ, ಸಮುದಾಯದ ಸಬಲೀಕರಣದಲ್ಲಿ ಅನನ್ಯ ಕೊಡುಗೆ ನೀಡುತ್ತಿವೆ ಎಂದರು. ಸಂಸ್ಥೆಯ ಅಭಿವೃದ್ಧಿಯ ಪಥವನ್ನು ಶ್ಲಾಘಿಸದ ಅವರು ಸೊಸೈಟಿಯ ಶ್ರೇಯೋಭಿವೃದ್ಧಿಗಾಗಿ ಸದಸ್ಯರೆಲ್ಲರೂ ಶ್ರಮಿಸಬೇಕೆಂದು ಕರೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa