ಹೊಸಪೇಟೆ, 22 ಜೂನ್ (ಹಿ.ಸ.) :
ಆ್ಯಂಕರ್ : ಹೊಸಪೇಟೆ ನಗರ ವಿಭಾಗ ಮತ್ತು ಹಗರಿಬೊಮ್ಮನಹಳ್ಳಿ ಗ್ರಾಮೀಣ ವಿಭಾಗೀಯ ಕಚೇರಿಗಳಲ್ಲಿ ನಾಳೆ ಮಧ್ಯಾಹ್ನ 3 ಗಂಟೆಗೆ ಹೊಸಪೇಟೆ ಜೆಸ್ಕಾಂ ಕಾರ್ಯ ಮತ್ತು ಪಾಲನಾ ವೃತ್ತ ಕಚೇರಿಯ ಅಧಿಕ್ಷಕ ಅಭಿಯಂತರರ ಅಧ್ಯಕ್ಷತೆಯಲ್ಲಿ ಗ್ರಾಹಕರ ಸಂವಾಧ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯ ಮತ್ತು ಪಾಲನಾ ನಗರ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಕೆ. ಸತೀಶ್ ತಿಳಿಸಿದ್ದಾರೆ.
ಹೊಸಪೇಟೆ ನಗರ ಹಾಗೂ ಹಗರಿಬೊಮ್ಮನಹಳ್ಳಿ ಗ್ರಾಮೀಣ ಪ್ರದೇಶದ ಗ್ರಾಹಕರು ಮತ್ತು ಸಾರ್ವಜನಿಕರು ಸಭೆಗೆ ಭಾಗವಹಿಸಿ ತಮ್ಮ ಕುಂದು ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್