ನವದೆಹಲಿ, 22 ಜೂನ್ (ಹಿ.ಸ.) :
ಆ್ಯಂಕರ್ : ಮುಂಗಾರು ಪ್ರವೇಶಿಸಿರುವ ಹಿನ್ನೆಲೆಯಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ಜೂನ್ 28ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವಾಯುವ್ಯ ಭಾರತ, ಮಧ್ಯಪ್ರದೇಶ, ಗುಜರಾತ್, ಕೊಂಕಣ, ಗೋವಾ, ಈಶಾನ್ಯ ರಾಜ್ಯಗಳು, ದಕ್ಷಿಣ ಭಾರತದ ಕರಾವಳಿ ಪ್ರದೇಶಗಳಲ್ಲಿ ನಿರಂತರ ಮಳೆಯಾಗುವ ನಿರೀಕ್ಷೆಯಿದೆ. ಕೆಲವೆಡೆ ಜು.22 ಮತ್ತು 24ರಂದು 20 ಸೆಂ.ಮೀಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಜಮ್ಮು-ಕಾಶ್ಮೀರ ಹಾಗೂ ಈಶಾನ್ಯ ಭಾರತದಲ್ಲಿ ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ ಮುಂತಾದ ರಾಜ್ಯಗಳಲ್ಲಿ ಭೂಕುಸಿತದ ಆತಂಕವಿದೆ.
ಕೇರಳ, ಕರ್ನಾಟಕ, ಮಹಾರಾಷ್ಟ್ರ ಕರಾವಳಿ, ತೆಲಂಗಾಣ, ಆಂಧ್ರಪ್ರದೇಶ, ಯಾನಂ ಸೇರಿದಂತೆ ದಕ್ಷಿಣ ರಾಜ್ಯಗಳಲ್ಲಿಯೂ ಬಲವಾದ ಗಾಳಿಯೊಂದಿಗೆ ಮಳೆ ಸುರಿಯಲಿದೆ.
ಜು.22–24 ರ ನಡುವೆ ತಮಿಳುನಾಡು, ಆಂಧ್ರಪ್ರದೇಶದ ಒಳನಾಡು ಹಾಗೂ ರಾಯಲಸೀಮಾದ ಕೆಲವು ಭಾಗಗಳಲ್ಲಿ ಆರ್ದ್ರತೆಯ ಹೆಚ್ಚಿನ ಬಿಸಿ ವಾತಾವರಣವಿರಲಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರಬಹುದು.
ಪ್ರವಾಸೋದ್ಯಮ ಅಥವಾ ಹೊರಾಂಗಣ ಕಾರ್ಯ ನಿರ್ವಹಿಸುವವರು ಮುನ್ನೆಚ್ಚರಿಕೆ ವಹಿಸಬೇಕು. ಸಂಚಾರ ದಟ್ಟಣೆ, ವಿದ್ಯುತ್ ಹಾಗೂ ಸಂಪರ್ಕ ಸೇವೆಗಳ ಅಡಚಣೆ, ಪ್ರವಾಹದ ಪರಿಸ್ಥಿತಿ, ಮರಗಳು ಬೀಳುವ ಅಪಾಯಗಳು ಎದುರಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa