ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ
ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ
ಸಾಮೆ ಸಂಗ್ರಹ ಚಿತ್ರ


ಕೋಲಾರ, ೨೨ ಜೂನ್ (ಹಿ.ಸ) :

ಆ್ಯಂಕರ್ : ನಶಿಸಿ ಹೋಗುತ್ತಿರುವ ದೇಸಿ ಮತ್ತು ಸಾಂಪ್ರದಾಯಿಕ ತಳಿಗಳನ್ನು ಸಂರಕ್ಷಣೆ ಮಾಡಲು ಸರ್ಕಾರ ಮುಂದಾಗಿದೆ. ಕೃಷಿ ಇಲಾಖೆ ಮೂಲಕ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ ಘೋಷಿಸಿದೆ. ದೇಸಿ ತಳಿಗಳನ್ನು ಸಂರಕ್ಷಿಸುತ್ತಿರುವ ರೈತರು ಈ ಕಾರ್ಯಕ್ರಮದ ಉಪಯೋಗ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ದೇಸಿ ತಳಿಗಳ ನೋಂದಾಯಿಸಬೇಕಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸುಮಾ ತಿಳಿಸಿದ್ದಾರೆ.

ಆಯಾ ಪ್ರದೇಶದಲ್ಲಿ ಸ್ಥಳೀಯ ತಳಿಗಳು ಆಥವಾ ಸಾಂಪ್ರದಾಯಿಕ ಪದ್ಧತಿಯಿಂದ ಅಭಿವೃದ್ಧಿ ನಿರ್ವಹಿಸಲ್ಪಡುವ ತಳಿಗಳನ್ನು ದೇಸಿ ತಳಿಗಳೆಂದು ಕರೆಯಲಾಗುತ್ತದೆ. ರೈತರು ಸಾಂಪ್ರದಾಯಕ, ಪರಂಪರೆ, ಜಾನಪದ ಪ್ರಭೇದಗಳಾಗಿರುತ್ತವೆ ಇಂತಹ ವಿಶೇಷ ದೇಶಿ ತಳಿಗಳನ್ನು ಉಳಿಸಿಕೊಂಡು ಬಂದಿರುವ ರೈತರು ಕೃಷಿ ಇಲಾಖೆಯೊಂದಿಗೆ ಕೆಲಸ ಮಾಡಲು ಅವಕಾಶವಾಗಲಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಡಿ ಆಯ್ಕೆಯಾದ ಬೆಳೆಗಳೆಂದರೆ ಭತ್ತ, ರಾಗಿ, ಮೆಕ್ಕೆಜೋಳ, ತೊಗರಿ, ಹುರುಳಿ, ಅವರೆ, ಅಲಸಂಧೆ, ಮಡಕಿಕಾಳು, ಹುಚ್ಚೇಳ್ಳು, ಕುಸುಬೆ, ಎಳ್ಳು ನವಣೆ, ಸಾಮೆ, ಊದಲು, ಕೊರಲೆ, ಹಾರಕ, ಬರಗು ಮತ್ತು ಸಲಹಾ ಸಮಿತಿ ಶಿಫಾರಸು ಮಾಡುವ ಇತರೆ ಬೆಳೆಗಳಲ್ಲಿ ದೇಸಿ ತಳಿಗಳಿದ್ದರೆ ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳಬೇಕಿದೆ.

ದೇಸಿ ತಳಿಗಳ ವಿಶಿಷ್ಟ ಗುಣಲಕ್ಷಣಗಳು ಮತ್ತು ಭೌಗೋಳಿಕ ಮೂಲಗಳ ಕಾರಣದಿಂದ ವೈಜ್ಞಾನಿಕವಾಗಿ ಅಭಿವೃದ್ಧಿ ಪಡಿಸಲಾದ ಅಧಿಸೂಚಿತ ಪ್ರಭೇದಗಳಿಗಿಂತ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿದ್ದು, ಆದರೆ ಕೆಲವೇ ರೈತರ ಇಂತಹ ದೇಸಿ ತಳಿ ಕೃಷಿ ಮಾಡುವುದನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ ನೂತನ ಕಾರ್ಯಕ್ರಮ ಪರಿಚಯಿಸಲಾಗಿದೆ.

ಕಣ್ಮರೆಯಾಗುತ್ತಿರುವ ತಳಿಗಳನ್ನು ಸಂರಕ್ಷಿಸುವ ಜತೆಗೆ ಆಯಾ ಸ್ಥಳೀಯ ಪ್ರದೇಶಕ್ಕೆ ಸೂಕ್ತವಾದ ದೇಸಿ ತಳಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣಿ ಗುರಿಹೊಂದಲಾಗಿದೆ. ಗುರುತಿಸಿದ ದೇಸಿ ತಳಿಗಳನ್ನು ಅಭಿವೃದ್ಧಿ ಪಡಿಸಿ ಬಿಡುಗಡೆ ಮಾಡುವುದು. ದೇಸಿ ತಳಿಗಳನ್ನು ಹಿಂದಿನಿAದಲೂ ಸಂರಕ್ಷಿಸಿ ಕೃಷಿ ಮಾಡುತ್ತಿರುವ ರೈತರಿಗೆ ಬೆಂಬಲ ನೀಡುವ ಜತೆಗೆ ದೇಸಿ ತಳಿಗಳ ಜನಪ್ರಿಯತೆಗೆ ಬೆಂಬಲ ನೀಡುವ ಸಂಕಲ್ಪ ಮಾಡಲಾಗಿದೆ.

ದೇಸಿ ತಳಿಗಳನ್ನು ಸಂರಕ್ಷಿಸಿ ಮತ್ತು ಬೆಳಸುವ ಮೂಲಕ ಕೃಷಿ ಪರಂಪರೆ ಮುಂದುವರೆಸುತ್ತಿರುವ ರೈತರನ್ನು ಗುರುತಿಸಿಸುವುದು ಮತ್ತು ಉತ್ತೇಜಿಸುವುದು ಅಗತ್ಯವಿದ್ದು, ಇದು ದೇಸಿ ತಳಿಗಳ ನಿರಂತರ ಕೃಷಿ ಪ್ರೋತ್ಸಾಹಿಸಲು ಜೀವ ವೈವಿಧ್ಯತೆ ಬೆಂಬಲಿಸಲು ಹಾಗೂ ಸುಸ್ಥಿರ ಕೃಷಿ ಪದ್ಧತಿಗಳನ್ನು ಪೋಷಿಸಲು ಸಹಕಾರಿಯಾಗಲಿದೆ. ದೇಸಿ ತಳಿಗಳ ಸಂರಕ್ಷಣೆ ಮತ್ತು ಕೃಷಿಯಲ್ಲಿ ತೊಡಗಿರುವ ರೈತರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ಇರಬೇಕು, ಬೀಜ ಬ್ಯಾಂಕ್ ನಲ್ಲಿರಿಸಲು ರೈತರು ಕಡ್ಡಾಯವಾಗಿ ಅಗತ್ಯ ಪ್ರಮಾಣದ ದೇಸಿ ತಳಿಗಳ ಬೀಜಗಳನ್ನು ನೀಡಲು ಸಿದ್ಧರಿರಬೇಕು. ಜಾನುವಾರು ನಿರ್ವಹಣೆ, ಕೊಟ್ಟಿಗೆ ಗೊಬ್ಬರ ಎರೆಹುಳು ಗೊಬ್ಬರ, ಪುನರುತ್ಪಾದಕ ಕೃಷಿ ಮತ್ತು ಇತರ ಸುಸ್ಥಿರ ಕೃಷಿ ಚಟುವಟಿಕೆ ಕೈಗೊಂಡಿರುವ ರೈತರನ್ನು ಕೃಷಿ ಇಲಾಖೆ ಜೊತೆಯಲ್ಲಿ ಕೊಂಡೊಯ್ಯಲಿದೆ ಎಂದು ತಿಳಿಸಿದ್ದಾರೆ.

ರೈತರು ತಲೆಮಾರುಗಳಿಂದ ಬೆಳೆದ ಸಾಂಪ್ರದಾಯಿಕ ಪ್ರಭೇದಗಳು. ಸ್ಥಳೀಯ ಕೃಷಿ ವೈವಿದ್ಯತೆ ಮತ್ತು ಪ್ರದೇಶಕ್ಕೆ ಹೊಂದಿಕೊAಡಿರಬೇಕು. ದೇಸಿ ತಳಿಗಳು ವಿಶಿಷ್ಟವಾದ ಗುಣಲಕ್ಷಣಗಳನ್ನು ಹೊಂದಿರಬೇಕು.

ಆಸಕ್ತ ದೇಶಿ ತಳಿ ಹೊಂದಿರುವ ರೈತರು ಸಂಬ0ಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಿ ಈ ಯೋಜನೆಯಡಿ ನೋಂದಾಯಿಸಿಕೋಳ್ಳಬಹುದೆAದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿತ್ರ : ಸಾಮೆ ಸಂಗ್ರಹ ಚಿತ್ರ

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande