ಕೊಪ್ಪಳ, 22 ಜೂನ್ (ಹಿ.ಸ.) :
ಆ್ಯಂಕರ್ : ಮಾಜಿ ಮಂತ್ರಿ ದಿ. ಕೆಎಚ್ ಪಾಟೀಲ್ ಅವರು ತಮ್ಮ ಜೀವನದುದ್ದಕ್ಕೂ ರೈತರ ಏಳಿಗೆಗಾಗಿ ಶ್ರಮಿಸಿದ್ದಾರೆ. ರಾಜಕಾರಣದಲ್ಲಿ ಸತ್ಯವನ್ನು ಹೇಳುವ ಮೂಲಕ ನೇರ ಮತ್ತು ನಿಷ್ಠುರವಾಗಿ ಮಾತನಾಡುತ್ತಿದ್ದರು. ಈಗಿರುವ ರಾಜಕಾರಣಿಗಳಿಗೆ ಅವರು ಸ್ಪೂರ್ತಿದಾಯಕವಾಗಿದ್ದಾರೆ ಎಂದು ಸಚಿವ ಎನ್ ಎಸ್ ಬೋಸರಾಜು ಅವರು ತಿಳಿಸಿದ್ದಾರೆ. .
ಕೊಪ್ಪಳ ಜಿಲ್ಲೆಯ ಕೂಕನೂರು ಗ್ರಾಮದಲ್ಲಿ ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಮಾಜಿ ಸಚಿವರು ಧೀಮಂತ ನಾಯಕರಾದ ಡಿ ಕೆ ಪಾಟೀಲ್ ಅವರ ಪುತ್ತಳಿ ಅನಾವರಣ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ನ ಸಭಾಪತಿಗಳಾದ ಬಸವರಾಜ್ ಹೊರಟ್ಟಿ ಗೃಹ ಸಚಿವರಾದ ಜಿ ಪರಮೇಶ್ವರ್ ಮುಖ್ಯ ಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್ ವಿ ದೇಶಪಾಂಡೆ ಹಿಂದುಳಿದ ವರ್ಗದ ಸಚಿವರಾದ ಶಿವರಾಜ್ ತಂಗಡಿಗಿ ಪ್ರವಾಸೋದ್ಯಮ ಇಲಾಖೆ ಸಚಿವರಾದ ಎಚ್ ಕೆ ಪಾಟೀಲ್ ಅವರೊಂದಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ಭಾಗವಹಿಸಿ ಧೀಮಂತ ನಾಯಕರಾದ ದಿ.ಕೆಎಚ್ ಪಾಟೀಲ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿದರು.
ದಿ. ಕೆಎಚ್ ಪಾಟೀಲ್ ಅವರನ್ನು ಕೇವಲ ಮೂರ್ತಿಯಾಗಿ ಕಂಡರೆ ಸಾಲದು ನಾವೆಲ್ಲರೂ ಹಾಗೂ ಯುವ ಪೀಳಿಗೆ ಅವರನ್ನು ಪೂರ್ತಿಯಾಗಿ ತೆಗೆದುಕೊಂಡು ಅವರ ಹಾದಿಯಲ್ಲಿ ಸಾಗಬೇಕು. ಸಹಕಾರ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಗಣಿತವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಮರೇಗೌಡ ಪಾಟೀಲ್ ಬಯ್ಯಾಪುರ್, ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದರಾದ ರಾಜಶೇಖರ್ ಹಿಟ್ನಾಳ್, ಮಾಜಿ ಸಂಸದರಾದ ಸಂಕಣ್ಣ ಕರಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್