ಶಿವಮೊಗ್ಗ, 22 ಜೂನ್ (ಹಿ.ಸ.) :
ಆ್ಯಂಕರ್ : ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್) ನೋಂದಣಿಯನ್ನು ಸುಗಮವಾಗಿ ನಿಭಾಯಿಸಲು ಜೂನ್ 24 ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಸರ್ಕಾರಿ ನೌಕರರ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘ ಆಯೋಜಿಸಿದೆ.
ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಉದ್ಘಾಟಿಸಲಿದ್ದು, ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳು:
ನಿರ್ಮಲಾ: HRMS-2 ಪರಿಚಯ ಹಾಗೂ ESR ಕುರಿತು
ಸುಮಂತ್: HRMS-2 ಮಾದರಿಗಳ ಕುರಿತು
ಸುಧಾಮಣಿ: ಕೆಎಎಸ್ಎಸ್ ನೋಂದಣಿ ಕುರಿತು ಮಾಹಿತಿ ನೀಡಲಿದ್ದಾರೆ.
ಜಿಲ್ಲೆಯ ಸರ್ಕಾರಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಎಂದು ಸಂಘದ ಅಧ್ಯಕ್ಷ ಆರ್. ಮೋಹನ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa