ರಾಯ್‌ಪುರದಲ್ಲಿ ನಕ್ಸಲ್‌ ವಿರೋಧಿ ಸಭೆ
ರಾಯಪುರ್, 23 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಛತ್ತೀಸ್‌ಗಢ ನಾರಾಯಣಪುರ ಪ್ರವಾಸವನ್ನು ಭದ್ರತಾ ಹಾಗೂ ವಾತಾವರಣ ಕಾರಣಗಳಿಂದ ರದ್ದುಪಡಿಸಲಾಗಿದೆ. ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಅವರು ಇಂದು ನಾರಾಯಣಪುರಕ್ಕೆ ಹೊರಡಬೇಕಾದ ಪ್ರವಾಸವನ್ನು ಕೈಬಿಟ್ಟಿದ್ದಾರೆ. ಈ ವೇಳ
Amita sha


ರಾಯಪುರ್, 23 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಛತ್ತೀಸ್‌ಗಢ ನಾರಾಯಣಪುರ ಪ್ರವಾಸವನ್ನು ಭದ್ರತಾ ಹಾಗೂ ವಾತಾವರಣ ಕಾರಣಗಳಿಂದ ರದ್ದುಪಡಿಸಲಾಗಿದೆ. ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಅವರು ಇಂದು ನಾರಾಯಣಪುರಕ್ಕೆ ಹೊರಡಬೇಕಾದ ಪ್ರವಾಸವನ್ನು ಕೈಬಿಟ್ಟಿದ್ದಾರೆ.

ಈ ವೇಳೆ, ಅವರು ರಾಜಧಾನಿ ರಾಯ್‌ಪುರದಲ್ಲಿಯೇ ಉಳಿದು, ಭದ್ರತಾ ಪಡೆಗಳ ಕಮಾಂಡರ್‌ಗಳೊಂದಿಗೆ ನಕ್ಸಲ್‌ವಿರೋಧಿ ಕಾರ್ಯಾಚರಣೆಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಛತ್ತೀಸ್‌ಗಢ ಮಾತ್ರವಲ್ಲದೆ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಜಾರ್ಖಂಡ್, ಒಡಿಶಾ ಮತ್ತು ಮಧ್ಯಪ್ರದೇಶ ರಾಜ್ಯಗಳ ಉನ್ನತ ಪೊಲೀಸ್ ಅಧಿಕಾರಿಗಳು ಭಾಗವಹಿಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande