ವೃತ್ತಿಪರ ತರಬೇತಿ ಕೋರ್ಸ್‍ಗಳಿಗೆ ಶಿಷ್ಯವೇತನ, ತರಬೇತಿಗೆ ಅರ್ಜಿ ಆಹ್ವಾನ
ಹೊಸಪೇಟೆ, 23 ಜೂನ್ (ಹಿ.ಸ.) : ಆ್ಯಂಕರ್ : 2024-25ನೇ ಸಾಲಿನಲ್ಲಿ ಐ.ಐ.ಎಸ್.ಸಿ, ಐ.ಐ.ಟಿ ಮತ್ತು ಎನ್.ಐ.ಟಿ ಸಂಸ್ಥೆಗಳ ಮೂಲಕ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (ಅರ್ಟಿಫಿಷಿಯಲ್ ಇಂಟಲಿಜೆನ್ಸಿ ಮತ್ತು ಮೆಷನ್ ಲರ್ನಿಂಗ್) ವೃತ್ತಿಪರ ತರಬೇತಿ ಕೋರ್ಸ್‍ಗಳಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ
ವೃತ್ತಿಪರ ತರಬೇತಿ ಕೋರ್ಸ್‍ಗಳಿಗೆ ಶಿಷ್ಯವೇತನ, ತರಬೇತಿಗೆ ಅರ್ಜಿ ಆಹ್ವಾನ


ಹೊಸಪೇಟೆ, 23 ಜೂನ್ (ಹಿ.ಸ.) :

ಆ್ಯಂಕರ್ : 2024-25ನೇ ಸಾಲಿನಲ್ಲಿ ಐ.ಐ.ಎಸ್.ಸಿ, ಐ.ಐ.ಟಿ ಮತ್ತು ಎನ್.ಐ.ಟಿ ಸಂಸ್ಥೆಗಳ ಮೂಲಕ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (ಅರ್ಟಿಫಿಷಿಯಲ್ ಇಂಟಲಿಜೆನ್ಸಿ ಮತ್ತು ಮೆಷನ್ ಲರ್ನಿಂಗ್) ವೃತ್ತಿಪರ ತರಬೇತಿ ಕೋರ್ಸ್‍ಗಳಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಮತ್ತು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್ ಪದವಿಧರರಿಗೆ ರೂ.15,000 ಶಿಷ್ಯವೇತನ ಹಾಗೂ ತರಬೇತಿಯನ್ನು ನೀಡಲಾಗುವುದು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಮೂಲನಿವಾಸಿ ಮತ್ತು ಅಲೆಮಾರಿ, ಅರೆ ಅಲೆಮಾರಿ ಮತ್ತು ಸೂಕ್ಷ್ಮ, ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (ಅರ್ಟಿಫಿಷಿಯಲ್ ಇಂಟಲಿಜೆನ್ಸಿ ಮತ್ತು ಮೆಷನ್ ಲರ್ನಿಂಗ್) ತರಬೇತಿ ಹಾಗೂ ಶಿಷ್ಯವೇತನವನ್ನು ನೀಡಲಾಗುವುದು.

ಷರತ್ತುಗಳು : ಅರ್ಜಿ ಸಲ್ಲಿಸಲು ಜುಲೈ.04 ಕೊನೆಯ ದಿನಾಂಕವಾಗಿರುತ್ತದೆ. ಅಭ್ಯರ್ಥಿಯು ಕರ್ನಾಟಕ ರಾಜ್ಯದ ಮೂಲ ನಿವಾಸಿಯಾಗಿರಬೇಕು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ರಾಜ್ಯ, ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಬಿಇ, ಬಿ.ಟೆಕ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ.

ಅಭ್ಯರ್ಥಿಯು ಬಿಇ, ಬಿ.ಟೆಕ್ ಕೋರ್ಸ್‍ಗಳಲ್ಲಿ ಕನಿಷ್ಟ ಶೇ.55 ರಷ್ಟು ಕಡ್ಡಾಯವಾಗಿ ಅಂಕಗಳಿಸಿರಬೇಕು, ಕೋರ್ಸ್ ಅವಧಿಯು ಗರಿಷ್ಟ 02 ವಾರಗಳಾಗಿರಬೇಕು, ಯೋಜನೆಯಡಿ ಶಿಷ್ಯವೇತನ ಪಡೆಯಲು ಪದವಿ ಪೆÇರೈಸಿದ 5 ವರ್ಷದ ಒಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು, ಅಭ್ಯರ್ಥಿಯ ಕುಟುಂಬದ ಅದಾಯ ರೂ.5 ಲಕ್ಷ ಮೀರಬಾರದು, ಮೂಲನಿವಾಸಿ ಮತ್ತು ಅಲೆಮಾರಿ, ಅರೆ ಅಲೆಮಾರಿ ಮತ್ತು ಸೂಕ್ಷ್ಮ, ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಐಐಎಸ್‍ಸಿ, ಐಐಟಿ ಮತ್ತು ಎನ್.ಐ.ಟಿ ಸಂಸ್ಥೆಗಳ ಹೊರತುಪಡಿಸಿ ಬೇರೆ ವಿದ್ಯಾಸಂಸ್ಥೆಗಳಲ್ಲಿ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಶಿಷ್ಯವೇತನ ಪಡೆಯಲು ಅರ್ಹರಿರುವುದಿಲ್ಲ.

ಸಂಪರ್ಕದ ವಿವರ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಹೊಸಪೇಟೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೂಡ್ಲಿಗಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಹರಪನಹಳ್ಳಿ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಹಗರಿಬೊಮ್ಮನಹಳ್ಳಿ ತಾಲೂಕಿನ ಸಹಾಯಕ ನಿರ್ದೇಶಕರು, ಹಡಗಲಿಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande