ಕೆಂಪೇಗೌಡ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಹಲವಾರು ಸ್ಪರ್ಧೆಗಳು
ಕೆಂಪೇಗೌಡ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಹಲವಾರು ಸ್ಪರ್ಧೆಗಳು
ಕೆಂಪೇಗೌಡ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಹಲವಾರು ಸ್ಪರ್ಧೆಗಳು


ಕೋಲಾರ, ೨೩ ಜೂನ್ (ಹಿ.ಸ) :

ಆ್ಯಂಕರ್ : ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡ ರವರ ಕುರಿತು ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲು ಸರ್ಕಾರ ಸೂಚಿಸಿದ್ದು, ಕಾರ್ಯಕ್ರಮವನ್ನು ಆಯೋಜಿಸಲು ಪ್ರತಿ ತಾಲ್ಲೂಕಿಗೆ ಒಂದು ಲಕ್ಷ ರೂಪಾಯಿ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಂಗಳ ತಿಳಿಸಿದರು.

ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಅಂಗವಾಗಿ ಶಾಲಾ ಕಾಲೇಜುಗಳಲ್ಲಿ ಏರ್ಪಡಿಸಲಾಗುವ ಹಲವಾರು ಸ್ಪರ್ಧೆಗಳ ಕುರಿತು ಅಪರ ಜಿಲ್ಲಾಧಿಕಾರಿ ಮಂಗಳ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಭೆ ನಡೆಸಿದರು.

ನಾಡಪ್ರಭು ಕೆಂಪೇಗೌಡರ ಕುರಿತು ಶಾಲಾ ಕಾಲೇಜುಗಳಲ್ಲಿ ಸ್ಪರ್ಧೆಗಳನ್ನು ಏರ್ಪಡಿಸುವುದರ ಮೂಲಕ ಕೆಂಪೇಗೌಡರ ಸಾಧನೆ ಕುರಿತು ಅರಿವು ಮೂಡಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತು ರಸ ಪ್ರಶ್ನೆ, ಪ್ರಬಂಧ ಸ್ಪರ್ಧೆ, ಆಶು ಭಾಷಣ, ಕವನ ವಾಚನ, ಗಾಯನ, ಚಿತ್ರಕಲೆ ಸ್ಪರ್ಧೆ ಇವುಗಳಲ್ಲಿ ಯಾವುದಾದರು ಎರಡು ಸ್ಪರ್ಧೆಗಳನ್ನು ಏರ್ಪಡಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲೆಗಳಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತು ರಸ ಪ್ರಶ್ನೆ. ಪ್ರಬಂಧ ಸ್ಪರ್ಧೆ, ಆಶು ಭಾಷಣ, ಕವನ ವಾಚನ. ಗಾಯನ, ಚಿತ್ರಕಲೆ ಸ್ಪರ್ಧೆ ಇವುಗಳಲ್ಲಿ ಯಾವುದಾದರು ಎರಡು ಸ್ಪರ್ಧೆಗಳನ್ನು ಏರ್ಪಡಿಸುವುದಾಗಿ ತಿಳಿಸಿದರು.

ನಾಡಪ್ರಭು ಕೆಂಪೇಗೌಡರ ಕುರಿತು ರಸ ಪ್ರಶ್ನೆ, ಪ್ರಬಂಧ ಸ್ಪರ್ಧೆ, ಆಶು ಭಾಷಣ, ಕವನ ವಾಚನ, ಗಾಯನ, ಚಿತ್ರಕಲೆ ಸ್ಪರ್ಧೆ ಇವುಗಳಲ್ಲಿ ಯಾವುದಾದರು ನಾಲ್ಕು ಸ್ಪರ್ಧೆಗಳನ್ನು ಏರ್ಪಡಿಸುವುದು.ಜಿಲ್ಲೆಯಲ್ಲಿ ಬರುವ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಏರ್ಪಡಿಸಲು ಆದ್ಯತೆ ನೀಡುವುದು. ಸ್ಪರ್ಧೆಯಲ್ಲಿ ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಭಾಗವಹಿಸುಲು ಮುಕ್ತವಾಗಿರುತ್ತದೆ ಹಾಗೂ ಸ್ಪರ್ಧೆಯಲ್ಲಿ ಕನಿಷ್ಠ ೨೫ ವಿಧ್ಯಾರ್ಥಿಗಳು ಭಾಗವಹಿಸತ್ತಕ್ಕದ್ದು.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡರ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಗುವುದು (ಪ್ರಥಮ, ದ್ವಿತೀಯ, ತೃತೀಯ ಹಾಗೂ ಎರಡು ಸಮಾದಾನಕರ ಬಹುಮಾನ)ಕಾರ್ಯಕ್ರಮದ ಬಗ್ಗೆ ವರದಿಯೊಂದಿಗೆ ವಿಡಿಯೋ ಮತ್ತು ಛಾಯಾ ಚಿತ್ರಗಳನ್ನು ಸಲ್ಲಿಸಲು ಸೂಚಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ವಿಜಯಲಕ್ಷ್ಮಿ,ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಬಾಲಕೃಷ್ಣ,ಸಾರ್ವಜನಿಕ ಶಿಕ್ಷಣ ಇಲಾಖೆ ಶಂಕರೇಗೌಡ, ತಹಶೀಲ್ದಾರ್ ಗಳಾದ ನಾಗವೇಣಿ, ಗೀತಾ, ರೂಪ, ನಯನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande