ನಮ್ಮ ಆರೋಗ್ಯ, ನಮ್ಮ ಕೈಯಲ್ಲಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ
ದಾವಣಗೆರೆ, 23 ಜೂನ್ (ಹಿ.ಸ.) : ಆ್ಯಂಕರ್ : ಅತಿಸಾರ ಭೇದಿ ಸಾಮಾನ್ಯ ಖಾಯಿಲೆ ಅಲ್ಲ, ಇದು ತುಂಬಾ ಗಂಭೀರವಾದ ಖಾಯಿಲೆ. ಆದ್ದರಿಂದ ಅತಿಸಾರ ಭೇದಿ ತಡೆಯುವಲ್ಲಿ ಪ್ರತಿಯೊಬ್ಬರಲ್ಲಿ ಅರಿವು ಅಗತ್ಯ. ಅತಿಸಾರ ಭೇದಿಯ ನಿಯಂತ್ರಣ ಮತ್ತು ತಡೆಯುವಿಕೆ ಕುರಿತು ಸ್ವಚ್ಛತೆ, ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು ಎಂದು
Awareness


ದಾವಣಗೆರೆ, 23 ಜೂನ್ (ಹಿ.ಸ.) :

ಆ್ಯಂಕರ್ : ಅತಿಸಾರ ಭೇದಿ ಸಾಮಾನ್ಯ ಖಾಯಿಲೆ ಅಲ್ಲ, ಇದು ತುಂಬಾ ಗಂಭೀರವಾದ ಖಾಯಿಲೆ. ಆದ್ದರಿಂದ ಅತಿಸಾರ ಭೇದಿ ತಡೆಯುವಲ್ಲಿ ಪ್ರತಿಯೊಬ್ಬರಲ್ಲಿ ಅರಿವು ಅಗತ್ಯ. ಅತಿಸಾರ ಭೇದಿಯ ನಿಯಂತ್ರಣ ಮತ್ತು ತಡೆಯುವಿಕೆ ಕುರಿತು ಸ್ವಚ್ಛತೆ, ಪರಿಸರ ಶುಚಿತ್ವಕ್ಕೆ ಗಮನಹರಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದರು.

ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಅತಿಸಾರ ತಡೆಗಟ್ಟೋಣ, ಸ್ವಚ್ಚತೆ ಮತ್ತು ಓಆರ್‍ಎಸ್ ಮೇಲೆ ಇರಲಿ ಗಮನ ಎಂಬ ಘೋಷವಾಕ್ಯದೊಂದಿಗೆ ಅತಿಸಾರ ತಡೆಗಟ್ಟುವ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಅತಿಸಾರಕ್ಕೆ ಮುಖ್ಯ ಕಾರಣ ಸ್ವಚ್ಛತೆ ಇಲ್ಲದೇ ಇರುವುದೇ ಆಗಿದೆ. ಚಿಕ್ಕ ಮಕ್ಕಳನ್ನು ನೆಲದ ಮೇಲೆ ಆಟ ಆಡಲು ಬಿಡುವುದು, ಕೈಯಲ್ಲಿ ಮೊಬೈಲ್ ಇಟ್ಟುಕೊಳ್ಳುವುದು ಅತಿಯಾದ ಕಾರಣ. ನೊಣವಿಲ್ಲದ ಮನೆ ಯಾವಾಗಲೂ ಆರೋಗ್ಯವಾಗಿರುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಮನೆಯ ಮುಂದಿನ ಚರಂಡಿಯನ್ನು ಸ್ವಚ್ಚವಾಗಿ ಇಟ್ಟುಕೊಳ್ಳಬೇಕು. ಗ್ರಾಮ ಪಂಚಾಯಿತಿಯ ಸಿಬ್ಬಂದಿಯವರು ಬಂದು ಚರಂಡಿ ಸ್ವಚ್ಚಗೊಳಿಸಬೇಕೆಂದು ಕಾಯಬಾರದು, ಇದರಿಂದ ಸೊಳ್ಳೆ ನೊಣ ಹೆಚ್ಚಾಗುತ್ತವೆ. ಚಿಕ್ಕ ಮಕ್ಕಳಲ್ಲಿ ಸಾಮಾನ್ಯವಾಗಿ ಪದೇ ಪದೇ ಅತಿಸಾರ ಭೇದಿ ಉಂಟಾಗುತ್ತದೆ. ಆದ್ದರಿಂದ ಅತಿಸಾರ ತಡೆಯುವಲ್ಲಿ ಪ್ರತಿಯೊಬ್ಬರಲ್ಲಿಯೂ ಅರಿವು ಅಗತ್ಯ. ಊಟಕ್ಕಿಂತ ಮೊದಲು ಕಡ್ಡಾಯವಾಗಿ ಸಾಬೂನಿನಿಂದ ಕೈತೊಳೆದು ಊಟ ಮಾಡಬೇಕು. ಶುಚಿತ್ವ ಇದ್ದರೆ ನಮ್ಮ ಸುಮಾರು ಹಣ ಉಳಿತಾಯ ಮಾಡಿದಂತೆ ಆಗುತ್ತದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande