ರಾಯಚೂರು, 23 ಜೂನ್ (ಹಿ.ಸ.) :
ಆ್ಯಂಕರ್ : ರಾಯಚೂರಿನ ಅಂಚೆ ವಿಭಾಗೀಯ ಡಾಕ್ ಅದಾಲತ್ ಜೂನ್ 30ರ ಬೆಳಿಗ್ಗೆ 11 ಗಂಟೆಗೆ ನಗರದ ಕನಕದಾಸ ವೃತ್ತದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಭಾಗವಹಿಸುವಂತೆ ಕೋರಲಾಗಿದೆ.
ಸಾರ್ವಜನಿಕರು ಅಂಚೆ ಸೇವೆಗಳ ಬಗ್ಗೆ ತಮ್ಮ ದೂರುಗಳನ್ನು ಜೂನ್ 27 ರೊಳಗಾಗಿ ಅಂಚೆ ಕಚೇರಿಗಳ ಅಧೀಕ್ಷಕರ ಕಾರ್ಯಾಲಯ, ರಾಯಚೂರು ವಿಭಾಗ 584102ಗೆ ಸಲ್ಲಿಸಬಹುದಾಗಿದೆ ಎಂದು ಅಂಚೆ ಅಧೀಕ್ಷಕರ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್