ರಾಯಚೂರು, 23 ಜೂನ್ (ಹಿ.ಸ.) :
ಆ್ಯಂಕರ್ : ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅವರು ಜೂನ್ 23ರ ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 11.10ಕ್ಕೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಉಯ್ಯಾಲವಾಡ ನರಸಿಂಹ ರೆಡ್ಡಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ಬೆಳಿಗ್ಗೆ 11.15ಕ್ಕೆ ಹೆಲಿಕ್ಯಾಪ್ಟರ್ ನಿಂದ ನಿರ್ಗಮಿಸಿ, ರಾಯಚೂರ ತಾಲೂಕಿನ ಯರಗೇರಾ ಗ್ರಾಮದ ಹತ್ತಿರದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿನ ಹೆಲಿಪ್ಯಾಡ್ ಆವರಣಕ್ಕೆ ಬೆಳಗ್ಗೆ 11.35ಕ್ಕೆ ಆಗಮಿಸುವರು.
ಬಳಿಕ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುವ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನಾಮಕರಣ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಉದ್ಯಾನವನ ಮತ್ತು ಕಂಚಿನ ಪುತ್ಥಳಿ ಹಾಗೂ ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗಿಯಾಗುವರು.
ಬಳಿಕ ರಾಯಚೂರು ತಾಲೂಕಿನ ಯರಗೇರಾ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದ ಹತ್ತಿರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಇವರ ವತಿಯಿಂದ ನಡೆಯುವ ಬುಡಕಟ್ಟು ಸಾಂಸ್ಕøತಿಕ ಉತ್ಸವ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನಾಮಫಲಕ ಅನಾವರಣ ಹಾಗೂ 371(ಜೆ) ದಶಮಾನೋತ್ಸವ ಮತ್ತು 936.00 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗುವರು.
ಬಳಿಕ ಸಂಜೆ 4 ಗಂಟೆಗೆ ರಾಯಚೂರ ತಾಲೂಕಿನ ಯರಗೇರಾ ಗ್ರಾಮದ ಹತ್ತಿರದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿನ ಹೆಲಿಪ್ಯಾಡ್ನಿಂದ ನಿರ್ಗಮಿಸಿ 4.20ಕ್ಕೆ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಉಯ್ಯಾಲವಾಡ ನರಸಿಂಹ ರೆಡ್ಡಿ ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ವಿಶೇಷ ವಿಮಾನದ ಮೂಲಕ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಉಪ ಮುಖ್ಯಮಂತ್ರಿಗಳ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಬಿ.ಎಸ್.ಶ್ರೀಧರ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್