ಕೇಂದ್ರ ವಲಯ ಮಂಡಳಿಯ 25ನೇ ಸಭೆ
ವಾರಣಾಸಿ, 24 ಜೂನ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರ ವಾರಾಣಸಿಯಲ್ಲಿ ಕೇಂದ್ರ ವಲಯ ಮಂಡಳಿಯ 25ನೇ ಸಭೆ ಇಂದು ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ಅಧ್ಯಕ್ಷತೆ ವಹಿಸಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯ ಪ್ರದೇಶದ ಮುಖ್ಯಮಂ
Meeting


ವಾರಣಾಸಿ, 24 ಜೂನ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ ಸಂಸದೀಯ ಕ್ಷೇತ್ರ ವಾರಾಣಸಿಯಲ್ಲಿ ಕೇಂದ್ರ ವಲಯ ಮಂಡಳಿಯ 25ನೇ ಸಭೆ ಇಂದು ನಡೆಯಲಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ಅಧ್ಯಕ್ಷತೆ ವಹಿಸಲಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯ ಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್, ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಿಂಗ್ ಪಾಲ್ಗೊಳ್ಳಲಿದ್ದಾರೆ.

ಈ ಸಭೆಯಲ್ಲಿ ಸಾಮಾಜಿಕ ಅಭಿವೃದ್ಧಿ, ಕಾನೂನು ಸುವ್ಯವಸ್ಥೆ, ಗಡಿ ವಿವಾದ, ಜಲ ಹಂಚಿಕೆ, ಸಾರಿಗೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣದ ಕುರಿತು ಮಹತ್ವದ ಚರ್ಚೆಗಳು ನಡೆಯಲಿವೆ.

ಕೇಂದ್ರದ ಸಹಾಯವಿಲ್ಲದೆ ರಾಜ್ಯಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಶೇಷ ಚರ್ಚೆ ನಿರೀಕ್ಷೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande