ನವದೆಹಲಿ, 24 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಾಲಿವುಡ್ ನಟ ಆಮಿರ್ ಖಾನ್ ಅವರು ದೆಹಲಿಯಲ್ಲಿ ಆಕಸ್ಮಿಕವಾಗಿ ಭೇಟಿಯಾಗಿದ್ದು, ಪರಸ್ಪರ ಹಸ್ತಲಾಘವದ ಬಳಿಕ ಸಂಕ್ಷಿಪ್ತವಾಗಿ ಮಾತುಕತೆ ನಡೆಸಿದರು.
ಆಮಿರ್ ಖಾನ್ ನಿರ್ಮಿಸಿದ ‘ಸಿತಾರೆ ಜಮೀನ್ ಪರ್’ ಚಿತ್ರದ ಬಗ್ಗೆ ಅವರು ಸಿದ್ದರಾಮಯ್ಯ ಅವರಿಗೆ ವಿವರಿಸಿದರು.
ವಿಶೇಷ ಚೇತನ ಮಕ್ಕಳ ಕುರಿತ ಈ ಚಿತ್ರಕ್ಕೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿ, ಯಶಸ್ಸು ಕೋರಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa