ಬಳ್ಳಾರಿ, 24 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿಯ ಅನಂತಪುರ ರಸ್ತೆ, ತಾಳೂರು ರಸ್ತೆ, ಸಿರುಗುಪ್ಪ ರಸ್ತೆಯ ಸ್ಥಳಗಳಲ್ಲಿರುವ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಟಾಸ್ಕ್ ಪೋರ್ಸ್ ಸಮಿತಿ ಅಧಿಕಾರಿಗಳ ತಂಡವು ಮಂಗಳವಾರ ಆಕಸ್ಮಿಕ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದಾಗ 09 ಬಾಲ ಕಾರ್ಮಿಕರು ಕೆಲಸ ಮಾಡುತ್ತಿರುವುದು ಕಂಡುಬಂದಿದ್ದು, ಎಲ್ಲಾ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದ್ದು, ಮಕ್ಕಳ ವಯಸ್ಸಿನ ದೃಢೀಕರಣ ದಾಖಲೆ ಹಾಗೂ ಮಾಲೀಕರ ದಾಖಲೆ ಪಡೆದು ಮಾಲೀಕರ ವಿರುದ್ಧ ಬಾಲ ಹಾಗೂ ಕಿಶೋರ ಕಾರ್ಮಿಕ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ತಿಳಿಸಿದ್ದಾರೆ.
ದಾಳಿ ಸಂದರ್ಭದಲ್ಲಿ ಕಾರ್ಮಿಕ ನಿರೀಕ್ಷಕರಾದ ಪರಶುರಾಮ್, ರಮೇಶ್, ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿಗಳಾದ ನರಸಪ್ಪ, ಮನ್ಸೂರ್ ಬಾಷಾ, ಪೋಲಿಸ್ ಇಲಾಖೆಯ ಗುರುಪ್ರಸಾದ್, ಶಂಕರಪ್ಪ ಮಕ್ಕಳ ಸಹಾಯವಾಣಿ ಸಿಬ್ಬಂದಿ ಕಾರ್ತಿಕ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ನಿಲೋಫಿಯಾ, ರೀಚ್ ಸಂಸ್ಥೆಯ ಸಂಯೋಜಿಕಿಯಾದ ಲಕ್ಷ್ಮೀದೇವಿ, ಹನುಮಂತಪ್ಪ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್