ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ತರಬೇತಿಗೆ ಅರ್ಜಿ
ರಾಯಚೂರು, 24 ಜೂನ್ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಖೇಲೋ ಇಂಡಿಯಾ ಯೋಜನೆಯಡಿ ಸಣ್ಣ ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿಯನ್ನು ನೀಡಿದ್ದು, ಉತ್ತಮ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಒಂದು ವರ್ಷದ ಅವಧಿಗೆ ತರಬೇತಿಗೆ ಅರ್ಹ ಅಭ್ಯರ್ಥಿಗಳ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ತರಬೇತಿಗೆ ಅರ್ಜಿ


ರಾಯಚೂರು, 24 ಜೂನ್ (ಹಿ.ಸ.) :

ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಖೇಲೋ ಇಂಡಿಯಾ ಯೋಜನೆಯಡಿ ಸಣ್ಣ ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿಯನ್ನು ನೀಡಿದ್ದು, ಉತ್ತಮ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಒಂದು ವರ್ಷದ ಅವಧಿಗೆ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಖೇಲೋ ಇಂಡಿಯಾ ಯೋಜನೆಯಡಿ ಅಥ್ಲಟಿಕ್ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಜಿಲ್ಲೆಯ ಆಸಕ್ತ 12 ರಿಂದ 18 ವರ್ಷದ ಬಾಲಕ ಬಾಲಕಿಯರು ತಮ್ಮ ಜನ್ಮ ದಿನಾಂಕ ದೃಢೀಕರಣ ಪತ್ರ (ಶಾಲೆ ಅಥವಾ ಕಾಲೇಜು ಮುಖ್ಯಸ್ಥರಿಂದ ದೃಢೀಕೃತ) ಹಾಗೂ ಕ್ರೀಡಾ ಸಾಧನೆಯ ಪ್ರಶಸ್ತಿ ಪತ್ರದೊಂದಿಗೆ ಜೂನ್ 26ರ ಬೆಳಿಗ್ಗೆ 10 ಗಂಟೆಗೆ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ರಾಯಚೂರು ಇಲ್ಲಿ ನೋಂದಣೆ ಮಾಡಿಕೊಳ್ಳಬಹುದಾಗಿದೆ.

ಆಯ್ಕೆ ಪ್ರಕ್ರಿಯೆಗೆ ಕ್ರೀಡಾ ಸಮವಸ್ತ್ರದೊಂದಿಗೆ ಭಾಗವಹಿಸಬೇಕಾಗಿದ್ದು, ಅಥ್ಲೆಟಿಕ್ ಕ್ರೀಡೆಯ ಟ್ರಾಯಕ್ ಮತ್ತು ಪೀಲ್ಡ್ ಇವೆಂಟ್ಸಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಇತ್ತೀಚಿನ 02 ಭಾವಚಿತ್ರದೊಂದಿಗೆ ಸ್ವ-ವಿವರದ ಅರ್ಜಿಯನ್ನು ಆಯ್ಕೆ ಸಂದರ್ಭದಲ್ಲಿ ಸಲ್ಲಿಸಬೇಕು.

ಆಯ್ಕೆ ಸಂದರ್ಭದಲ್ಲಿ ಯಾವುದೇ ಗಾಯಗಳು ಅನಾರೋಗ್ಯ ಯಾವುದೇ ಇತರೆ ಸಾವು ನೋವುಗಳು ಶಾಶ್ವತ ಅಂಗವೈಕಲ್ಯ ಮತ್ತು ಜೀವಹಾನಿ ಸಂಭವಿಸಿದರೆ ಸಂಸ್ಥೆ ಅಥವಾ ಇಲಾಖೆ ಜವಾಬ್ದಾರಿಯುತವಾಗಿರುವುದಿಲ್ಲ. ಹಾಗೂ ಆಯ್ಕೆಗೆ ಹಾಜರಾಗುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ದಿನ ಭತ್ಯೆ ಅಥವಾ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ರಾಯಚೂರು ಕಚೇರಿ ಅಥವಾ ಖೇಲೋ ಇಂಡಿಯಾ ತರಬೇತುದಾರರಾದ ಚಂದ್ರಶೇಖರ್ ಮೊಬೈಲ್ ಸಂಖ್ಯೆ: 9886551214ಗೆ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande