ನಾರಾಯಣ ಗುರು-ಗಾಂಧಿ ಸಂವಾದ ಶತಮಾನೋತ್ಸವ
ನವದೆಹಲಿ, 24 ಜೂನ್ (ಹಿ.ಸ.) : ಆ್ಯಂಕರ್ : ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಕಾರ್ಯಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಸಮಾರಂಭ ನಡೆಯಲಿದೆ. ಈ ಸಂವಾದವು 1925ರ ಮಾರ್ಚ್ 1
Pm


ನವದೆಹಲಿ, 24 ಜೂನ್ (ಹಿ.ಸ.) :

ಆ್ಯಂಕರ್ : ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಕಾರ್ಯಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಸಮಾರಂಭ ನಡೆಯಲಿದೆ.

ಈ ಸಂವಾದವು 1925ರ ಮಾರ್ಚ್ 12ರಂದು ಗಾಂಧೀಜಿ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದಿತ್ತು. ವೈಕಂ ಸತ್ಯಾಗ್ರಹ, ಅಸ್ಪೃಶ್ಯತೆಯ ನಿರ್ಮೂಲನೆ, ಅಹಿಂಸೆ, ದಲಿತರ ಏಳಿಗೆ ಮತ್ತಿತರ ಸಾಮಾಜಿಕ ವಿಚಾರಗಳು ಚರ್ಚೆಗೆ ಬಂದಿದ್ದವು.

ಈ ಕಾರ್ಯಕ್ರಮವನ್ನು ಶ್ರೀ ನಾರಾಯಣ ಧರ್ಮ ಸಂಘಮ್ ಟ್ರಸ್ಟ್ ಆಯೋಜಿಸಿದ್ದು, ಪ್ರಮುಖ ಆಧ್ಯಾತ್ಮಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande