ನವದೆಹಲಿ, 24 ಜೂನ್ (ಹಿ.ಸ.) :
ಆ್ಯಂಕರ್ : ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಕಾರ್ಯಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ಸಮಾರಂಭ ನಡೆಯಲಿದೆ.
ಈ ಸಂವಾದವು 1925ರ ಮಾರ್ಚ್ 12ರಂದು ಗಾಂಧೀಜಿ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದಿತ್ತು. ವೈಕಂ ಸತ್ಯಾಗ್ರಹ, ಅಸ್ಪೃಶ್ಯತೆಯ ನಿರ್ಮೂಲನೆ, ಅಹಿಂಸೆ, ದಲಿತರ ಏಳಿಗೆ ಮತ್ತಿತರ ಸಾಮಾಜಿಕ ವಿಚಾರಗಳು ಚರ್ಚೆಗೆ ಬಂದಿದ್ದವು.
ಈ ಕಾರ್ಯಕ್ರಮವನ್ನು ಶ್ರೀ ನಾರಾಯಣ ಧರ್ಮ ಸಂಘಮ್ ಟ್ರಸ್ಟ್ ಆಯೋಜಿಸಿದ್ದು, ಪ್ರಮುಖ ಆಧ್ಯಾತ್ಮಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa